ಮೈಸೂರು: ಚಾಮುಂಡಿ ಬೆಟ್ಟದ ಪರಿಶುದ್ಧ ಪರಿಸರದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಹೊರ ರಾಜ್ಯದ ಕೆಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್ ಈ ಕುರಿತ ಮಾಹಿತಿ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.
ಮಹತ್ವದ ತೀರ್ಥಕ್ಷೇತ್ರವೊಂದಾದ ಚಾಮುಂಡಿ ಬೆಟ್ಟದಲ್ಲಿ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿಯೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದ ದೃಶ್ಯವನ್ನು ನೋಡಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಕೆಲವರು ಅವರ ವರ್ತನೆಯ ಫೋಟೋಗಳನ್ನು ತೆಗೆದು, ಪೊಲೀಸರಿಗೆ ನೀಡುವ ಮೂಲಕ ದೂರು ಸಲ್ಲಿಸಿದರು.
ಮರುಕ್ಷಣದಲ್ಲೇ ಚಾಮುಂಡಿ ಬೆಟ್ಟ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು. ಪೊಲೀಸರು ಯುವಕರಿಂದ ವಿಚಾರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಅಸಭ್ಯ ವರ್ತನೆ ಸಹಿಸಲಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಅಂತರಂಗವಾಗಿ ಯುವಕರಿಗೆ ನಡವಳಿಕೆಯ ಮಹತ್ವದ ಕುರಿತು ತಿಳುವಳಿಕೆ ನೀಡಿದ ಪೊಲೀಸರು, ಪುನರಾವೃತ್ತಿ ಆಗದಂತೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಅವರನ್ನು ಬಿಡುಗಡೆ ಮಾಡಿದರು.
ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ತೀರ್ಥಕ್ಷೇತ್ರಗಳಲ್ಲಿ ಶಿಸ್ತು ಮತ್ತು ಸೌಮ್ಯ ನಡವಳಿಕೆಯನ್ನು ಪಾಲಿಸುವ ಅಗತ್ಯವಿದೆ ಎಂದು ಪೊಲೀಸ್ ಇಲಾಖೆ ಮನವರಿಕೆ ಮಾಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…