Crime

ಮೆಟ್ರೋನಲ್ಲಿ ಮಹಿಳೆಯರ ಅಸಭ್ಯ ವಿಡಿಯೋ ಚಿತ್ರೀಕರಣ: ಇನ್‌ಸ್ಟಾ ಖಾತೆ ನಿರ್ವಾಹಕ ದಿಗಂತ್ ಬಂಧನ”

ಬೆಂಗಳೂರು, ಮೇ 23: ಮೆಟ್ರೋ ರೈಲಿನಲ್ಲಿ ಯುವತಿಯರ ಅಸಭ್ಯ ವಿಡಿಯೋಗಳನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ವಿಕೃತ ಮನಸ್ಥಿತಿಯನ್ನು ತೋರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಬನಶಂಕರಿ ಠಾಣೆಯ ಪೊಲೀಸರು ಪೀಣ್ಯದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ದಿಗಂತ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮೂಲವನು. ತಿಗಳರಪಾಳ್ಯ ನಿವಾಸಿಯಾಗಿ, ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ದಿನವೂ ಮೇಟ್ರೋ ಮೂಲಕ ಊರು–ಕೆಲಸದ ನಡುವಿನ ಪ್ರಯಾಣವನ್ನಾಡುತ್ತಿದ್ದ ದಿಗಂತ್, ಈ ಅವಧಿಯಲ್ಲಿ ಮಹಿಳೆಯರ ಖಾಸಗಿ ಕ್ಷಣಗಳನ್ನು ಅಕ್ರಮವಾಗಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು, ಇನ್‌ಸ್ಟಾಗ್ರಾಂನಲ್ಲಿ metro_chicks ಎಂಬ ಖಾತೆಯ ಮೂಲಕ 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ.

ಈ ಖಾತೆಗೆ ಸುಮಾರು 5,500ಕ್ಕೂ ಹೆಚ್ಚುಇದ್ದರೆಂಬ ಮಾಹಿತಿ ಲಭ್ಯವಾಗಿದೆ. ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಯುವತಿಯರ ಅಪಪ್ರಕಾರದ ದೃಶ್ಯಗಳನ್ನು ಅಪ್ಲೋಡ್ ಮಾಡಲಾಗಿದ್ದು, ಇತ್ತೀಚೆಗೆ ಈ ಪೇಜ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧಕ್ಕೆ ಗುರಿಯಾಯಿತು. ನಂತರದ ಹಂತದಲ್ಲಿ ಸಂಬಂಧಿತ ಖಾತೆಯಲ್ಲಿ ಇರುವ ಎಲ್ಲ ವಿಡಿಯೋಗಳನ್ನು ಅಜ್ಞಾತವಾಗಿ ಡಿಲೀಟ್ ಮಾಡಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯರ ಗೌರವ ಮತ್ತು ಗೌಪ್ಯತೆಗೆ ಧಕ್ಕೆ ತರುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಯುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಬನಶಂಕರಿ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ತಂತ್ರಜ್ಞಾನದ ಸಹಾಯದಿಂದ ಖಾತೆ ನಿರ್ವಾಹಕನ ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿಯು ಯಾವುದೇ ಮತ್ತಷ್ಟು ವಿಡಿಯೋಗಳನ್ನು ಶೇರ್ ಮಾಡಿದಿರುವ ವಿಚಾರದಲ್ಲಿಯೂ ತನಿಖೆ ಮುಂದುವರಿದಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago