ಬೆಂಗಳೂರು, ಮೇ 23: ಮೆಟ್ರೋ ರೈಲಿನಲ್ಲಿ ಯುವತಿಯರ ಅಸಭ್ಯ ವಿಡಿಯೋಗಳನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ವಿಕೃತ ಮನಸ್ಥಿತಿಯನ್ನು ತೋರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಬನಶಂಕರಿ ಠಾಣೆಯ ಪೊಲೀಸರು ಪೀಣ್ಯದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ದಿಗಂತ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮೂಲವನು. ತಿಗಳರಪಾಳ್ಯ ನಿವಾಸಿಯಾಗಿ, ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ದಿನವೂ ಮೇಟ್ರೋ ಮೂಲಕ ಊರು–ಕೆಲಸದ ನಡುವಿನ ಪ್ರಯಾಣವನ್ನಾಡುತ್ತಿದ್ದ ದಿಗಂತ್, ಈ ಅವಧಿಯಲ್ಲಿ ಮಹಿಳೆಯರ ಖಾಸಗಿ ಕ್ಷಣಗಳನ್ನು ಅಕ್ರಮವಾಗಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು, ಇನ್ಸ್ಟಾಗ್ರಾಂನಲ್ಲಿ metro_chicks ಎಂಬ ಖಾತೆಯ ಮೂಲಕ 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ.
ಈ ಖಾತೆಗೆ ಸುಮಾರು 5,500ಕ್ಕೂ ಹೆಚ್ಚುಇದ್ದರೆಂಬ ಮಾಹಿತಿ ಲಭ್ಯವಾಗಿದೆ. ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಯುವತಿಯರ ಅಪಪ್ರಕಾರದ ದೃಶ್ಯಗಳನ್ನು ಅಪ್ಲೋಡ್ ಮಾಡಲಾಗಿದ್ದು, ಇತ್ತೀಚೆಗೆ ಈ ಪೇಜ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧಕ್ಕೆ ಗುರಿಯಾಯಿತು. ನಂತರದ ಹಂತದಲ್ಲಿ ಸಂಬಂಧಿತ ಖಾತೆಯಲ್ಲಿ ಇರುವ ಎಲ್ಲ ವಿಡಿಯೋಗಳನ್ನು ಅಜ್ಞಾತವಾಗಿ ಡಿಲೀಟ್ ಮಾಡಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯರ ಗೌರವ ಮತ್ತು ಗೌಪ್ಯತೆಗೆ ಧಕ್ಕೆ ತರುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಯುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಬನಶಂಕರಿ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ತಂತ್ರಜ್ಞಾನದ ಸಹಾಯದಿಂದ ಖಾತೆ ನಿರ್ವಾಹಕನ ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿಯು ಯಾವುದೇ ಮತ್ತಷ್ಟು ವಿಡಿಯೋಗಳನ್ನು ಶೇರ್ ಮಾಡಿದಿರುವ ವಿಚಾರದಲ್ಲಿಯೂ ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…