ಪ್ರಧಾನಿ ಮೋದಿ ಮುಗಿಸಬೇಕು, ಇಲ್ಲದಿದ್ದರೆ ಭಾರತಕ್ಕೆ ಉಳಿಗಾಲವಿಲ್ಲ. ಕಾಂಗ್ರೆಸ್ ಹಿರಿಯ ನಾಯಕನ ಹೇಳಿಕೆ ಇದೀಗ ಭಾರಿ ವಿವಾದ ಸೃಷ್ಟಿಸಿದೆ. ಗೂಂಡಾ, ರೌಡಿಗಳ ರೀತಿಯ ಹೇಳಿಕೆ ವಿರುದ್ಧ ಭಾರತದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬಿರುಸಿನ ಪ್ರಚಾರಕ್ಕೆ ಇಳಿದಿದೆ. ಜೈಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಎಸ್ಎಸ್ ರಾಂಧವ, ಮೋದಿಯನ್ನು ಮುಗಿಸಬೇಕು. ಮೋದಿ ಇದ್ದರೆ ಭಾರತ ನಾಶವಾಗಲಿದೆ ಎಂದಿದ್ದಾರೆ.
ಅದಾನಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆಗೆ ಮುಂದಾಗುತ್ತಿಲ್ಲ. ಉದ್ಯಮಿಗಳಿಗೆ ಭಾರತವನ್ನು ಕೊಟ್ಟು ಬಿಜೆಪಿ ದೇಶವನ್ನೇ ಬರ್ಬಾದ್ ಮಾಡುತ್ತಿದೆ. ಅದಾನಿ ಬಗ್ಗೆ ಮಾತನಾಡುವುದು ಬಿಡಿ. ಮೋದಿ ಮುಗಿಸುವ ಕುರಿತು ಮಾತನಾಡಿ. ಮೋದಿ ಮುಗಿಸಿದರೆ ಭಾರತ ಉದ್ಯಮಿಗಳ ಕೈಯಿಂದ ಬಚಾವ್ ಆಗಲಿದೆ. ಆದರೆ ಮೋದಿ ಇದ್ದರೆ ಹಿಂದುಸ್ಥಾನ ನಿರ್ನಾಮವಾಗಲಿದೆ ಎಂದಿದ್ದಾರೆ.
ಮೋದಿಯ ದೇಶಭಕ್ತಿಯ ಅಸಲಿಯತ್ತು ನಮಗೆ ತಿಳಿದಿದೆ. ಬಿಜೆಪಿಯ ಯಾರೂ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ, ಜೈಲು ಸೇರಿಲ್ಲ. ಕಾಂಗ್ರೆಸ್ ನಾಯಕರು ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಇದು ಕಾಂಗ್ರೆಸ್ ಹಿರಿಯ ನಾಯಕ ಸುಖ್ಜಿಂದರ್ ಸಿಂಗ್ ರಾಂಧವ ವಿವಾದಾತ್ಮಕ ಮಾತುಗಳು. ಇದೀಗ ಇದೇ ಮಾತು ವಿವಾದ ಮಾತ್ರವಲ್ಲ, ಆಕ್ರೋಶಕ್ಕೂ ಕಾರಣವಾಗಿದೆ.
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…