Latest

ಮೋದಿ ಮುಗಿಸಿದರೆ ಭಾರತಕ್ಕೆ ಉಳಿಗಾಲ, ಇಲ್ಲದಿದ್ದರೆ ದೇಶ ನಿರ್ನಾಮ- ಕಾಂಗ್ರೆಸ್ ನಾಯಕ

ಪ್ರಧಾನಿ ಮೋದಿ ಮುಗಿಸಬೇಕು, ಇಲ್ಲದಿದ್ದರೆ ಭಾರತಕ್ಕೆ ಉಳಿಗಾಲವಿಲ್ಲ. ಕಾಂಗ್ರೆಸ್ ಹಿರಿಯ ನಾಯಕನ ಹೇಳಿಕೆ ಇದೀಗ ಭಾರಿ ವಿವಾದ ಸೃಷ್ಟಿಸಿದೆ. ಗೂಂಡಾ, ರೌಡಿಗಳ ರೀತಿಯ ಹೇಳಿಕೆ ವಿರುದ್ಧ ಭಾರತದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬಿರುಸಿನ ಪ್ರಚಾರಕ್ಕೆ ಇಳಿದಿದೆ. ಜೈಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಎಸ್‌ಎಸ್ ರಾಂಧವ, ಮೋದಿಯನ್ನು ಮುಗಿಸಬೇಕು. ಮೋದಿ ಇದ್ದರೆ ಭಾರತ ನಾಶವಾಗಲಿದೆ ಎಂದಿದ್ದಾರೆ.
ಅದಾನಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆಗೆ ಮುಂದಾಗುತ್ತಿಲ್ಲ. ಉದ್ಯಮಿಗಳಿಗೆ ಭಾರತವನ್ನು ಕೊಟ್ಟು ಬಿಜೆಪಿ ದೇಶವನ್ನೇ ಬರ್ಬಾದ್ ಮಾಡುತ್ತಿದೆ. ಅದಾನಿ ಬಗ್ಗೆ ಮಾತನಾಡುವುದು ಬಿಡಿ. ಮೋದಿ ಮುಗಿಸುವ ಕುರಿತು ಮಾತನಾಡಿ. ಮೋದಿ ಮುಗಿಸಿದರೆ ಭಾರತ ಉದ್ಯಮಿಗಳ ಕೈಯಿಂದ ಬಚಾವ್ ಆಗಲಿದೆ. ಆದರೆ ಮೋದಿ ಇದ್ದರೆ ಹಿಂದುಸ್ಥಾನ ನಿರ್ನಾಮವಾಗಲಿದೆ ಎಂದಿದ್ದಾರೆ.
ಮೋದಿಯ ದೇಶಭಕ್ತಿಯ ಅಸಲಿಯತ್ತು ನಮಗೆ ತಿಳಿದಿದೆ. ಬಿಜೆಪಿಯ ಯಾರೂ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ, ಜೈಲು ಸೇರಿಲ್ಲ. ಕಾಂಗ್ರೆಸ್ ನಾಯಕರು ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಇದು ಕಾಂಗ್ರೆಸ್ ಹಿರಿಯ ನಾಯಕ ಸುಖ್‌ಜಿಂದರ್ ಸಿಂಗ್ ರಾಂಧವ ವಿವಾದಾತ್ಮಕ ಮಾತುಗಳು. ಇದೀಗ ಇದೇ ಮಾತು ವಿವಾದ ಮಾತ್ರವಲ್ಲ, ಆಕ್ರೋಶಕ್ಕೂ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…

3 hours ago

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

8 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

8 hours ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

8 hours ago

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

21 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

23 hours ago