ಪ್ರಧಾನಿ ಮೋದಿ ಮುಗಿಸಬೇಕು, ಇಲ್ಲದಿದ್ದರೆ ಭಾರತಕ್ಕೆ ಉಳಿಗಾಲವಿಲ್ಲ. ಕಾಂಗ್ರೆಸ್ ಹಿರಿಯ ನಾಯಕನ ಹೇಳಿಕೆ ಇದೀಗ ಭಾರಿ ವಿವಾದ ಸೃಷ್ಟಿಸಿದೆ. ಗೂಂಡಾ, ರೌಡಿಗಳ ರೀತಿಯ ಹೇಳಿಕೆ ವಿರುದ್ಧ ಭಾರತದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬಿರುಸಿನ ಪ್ರಚಾರಕ್ಕೆ ಇಳಿದಿದೆ. ಜೈಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಎಸ್ಎಸ್ ರಾಂಧವ, ಮೋದಿಯನ್ನು ಮುಗಿಸಬೇಕು. ಮೋದಿ ಇದ್ದರೆ ಭಾರತ ನಾಶವಾಗಲಿದೆ ಎಂದಿದ್ದಾರೆ.
ಅದಾನಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆಗೆ ಮುಂದಾಗುತ್ತಿಲ್ಲ. ಉದ್ಯಮಿಗಳಿಗೆ ಭಾರತವನ್ನು ಕೊಟ್ಟು ಬಿಜೆಪಿ ದೇಶವನ್ನೇ ಬರ್ಬಾದ್ ಮಾಡುತ್ತಿದೆ. ಅದಾನಿ ಬಗ್ಗೆ ಮಾತನಾಡುವುದು ಬಿಡಿ. ಮೋದಿ ಮುಗಿಸುವ ಕುರಿತು ಮಾತನಾಡಿ. ಮೋದಿ ಮುಗಿಸಿದರೆ ಭಾರತ ಉದ್ಯಮಿಗಳ ಕೈಯಿಂದ ಬಚಾವ್ ಆಗಲಿದೆ. ಆದರೆ ಮೋದಿ ಇದ್ದರೆ ಹಿಂದುಸ್ಥಾನ ನಿರ್ನಾಮವಾಗಲಿದೆ ಎಂದಿದ್ದಾರೆ.
ಮೋದಿಯ ದೇಶಭಕ್ತಿಯ ಅಸಲಿಯತ್ತು ನಮಗೆ ತಿಳಿದಿದೆ. ಬಿಜೆಪಿಯ ಯಾರೂ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ, ಜೈಲು ಸೇರಿಲ್ಲ. ಕಾಂಗ್ರೆಸ್ ನಾಯಕರು ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಇದು ಕಾಂಗ್ರೆಸ್ ಹಿರಿಯ ನಾಯಕ ಸುಖ್ಜಿಂದರ್ ಸಿಂಗ್ ರಾಂಧವ ವಿವಾದಾತ್ಮಕ ಮಾತುಗಳು. ಇದೀಗ ಇದೇ ಮಾತು ವಿವಾದ ಮಾತ್ರವಲ್ಲ, ಆಕ್ರೋಶಕ್ಕೂ ಕಾರಣವಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…