Latest

ಉಗ್ರರ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಶ್ವಾನ ‘ಜೂಮ್’ ಸಾವು

ಶ್ರೀನಗರ: ಉಗ್ರರ ವಿರುದ್ದದ ಹೋರಾಟದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಭಾರತೀಯ ಸೇನೆಯ ಶ್ವಾನ ಜೂಮ್ ಗುರುವಾರ ಸಾವನ್ನಪ್ಪಿದೆ.
ಎರಡು ಬಾರಿ ಉಗ್ರರಿಂದ ಗುಂಡೇಟು ತಿಂದಿದ್ದ ಈ ಶ್ವಾನವನ್ನು ಶ್ರೀನಗರದ ಸಶಸ್ತ್ರ ಪಡೆಗಳ ಪಶು ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ ಮತ್ತು ಹಿಂಭಾಗದ ಬಲಗಾಲಿನ ಮೇಲೆ ಗುಂಡಿನ ಗಾಯವಾಗಿದ್ದ ಕಾರಣ ಅದಕ್ಕೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸೇನೆಯ ಶ್ವಾನ ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಸಾವನ್ನಪ್ಪಿದೆ. ಬೆಳಗ್ಗೆ 11-45ರವರೆಗೂ ನೋಡಲು ಚೆನ್ನಾಗಿದ್ದ, ಸ್ಪಂದಿಸುತ್ತಿದ್ದ ಶ್ವಾನ, ಇದಕ್ಕಿದ್ದಂತೆ ಏದುಸಿರು ಬಿಡುತ್ತಾ, ಕೆಳಗೆ ಬಿದ್ದಿತು ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ಜೂಮ್ ನಾಯಿಗೆ ವಹಿಸಲಾಗಿತ್ತು. ಆ ನಾಯಿ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಆ ನಾಯಿಯ ಮೇಲೆ ಎರಡು ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ನಾಯಿಗೆ ಗಂಭೀರವಾದ ಗಾಯವಾಗಿತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರೂ ಹೆದರದ ಈ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಗಿತ್ತು. ಜೂಮ್ ನಿಧನಕ್ಕೆ ಸೇನೆಯ ಉತ್ತರ ಕಮಾಂಡೋ ತೀವ್ರ ಸಂತಾಪ ಸೂಚಿಸಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago