ಶ್ರೀನಗರ: ಉಗ್ರರ ವಿರುದ್ದದ ಹೋರಾಟದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಭಾರತೀಯ ಸೇನೆಯ ಶ್ವಾನ ಜೂಮ್ ಗುರುವಾರ ಸಾವನ್ನಪ್ಪಿದೆ.
ಎರಡು ಬಾರಿ ಉಗ್ರರಿಂದ ಗುಂಡೇಟು ತಿಂದಿದ್ದ ಈ ಶ್ವಾನವನ್ನು ಶ್ರೀನಗರದ ಸಶಸ್ತ್ರ ಪಡೆಗಳ ಪಶು ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ ಮತ್ತು ಹಿಂಭಾಗದ ಬಲಗಾಲಿನ ಮೇಲೆ ಗುಂಡಿನ ಗಾಯವಾಗಿದ್ದ ಕಾರಣ ಅದಕ್ಕೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸೇನೆಯ ಶ್ವಾನ ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಸಾವನ್ನಪ್ಪಿದೆ. ಬೆಳಗ್ಗೆ 11-45ರವರೆಗೂ ನೋಡಲು ಚೆನ್ನಾಗಿದ್ದ, ಸ್ಪಂದಿಸುತ್ತಿದ್ದ ಶ್ವಾನ, ಇದಕ್ಕಿದ್ದಂತೆ ಏದುಸಿರು ಬಿಡುತ್ತಾ, ಕೆಳಗೆ ಬಿದ್ದಿತು ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ಜೂಮ್ ನಾಯಿಗೆ ವಹಿಸಲಾಗಿತ್ತು. ಆ ನಾಯಿ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಆ ನಾಯಿಯ ಮೇಲೆ ಎರಡು ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ನಾಯಿಗೆ ಗಂಭೀರವಾದ ಗಾಯವಾಗಿತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರೂ ಹೆದರದ ಈ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಗಿತ್ತು. ಜೂಮ್ ನಿಧನಕ್ಕೆ ಸೇನೆಯ ಉತ್ತರ ಕಮಾಂಡೋ ತೀವ್ರ ಸಂತಾಪ ಸೂಚಿಸಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…