Latest

ಇಂದಿರಾ ಕ್ಯಾಂಟೀನ್‌ ದುರ್ಬಲ ಸೇವೆ: ಬಡವರಿಗೆ ಅನ್ಯಾಯ, ಗುತ್ತಿಗೆದಾರರಿಗೆ ಲಾಭ.!

ಬಡವರ್ಗದ ಜನರಿಗೆ ಕುಡಿದಿನ, ಕೂಲಿಕಾರ್ಮಿಕರು, ಹಮಾಲಿಗಳು, ಬೀದಿ ವ್ಯಾಪಾರಿಗಳು ಹಾಗೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಿಂಡಿ–ಊಟದ ವಿಲ್ಲದ ಬದುಕು ಕಲ್ಪಿಸಲು ಸರ್ಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್‌ ಯೋಜನೆ, ವರ್ಷಗಳ ಬಳಿಕ ದಿನದಿಂದ ದಿನಕ್ಕೆ ಗುಣಮಟ್ಟ ಕಳೆದುಕೊಳ್ಳುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದ ಬಿ.ಎಚ್ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್‌ ಇದೀಗ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ತಿಂಗಳುಗಳಿಂದ ಫ್ರಿಡ್ಜ್‌ ಕೆಲಸ ಮಾಡುತ್ತಿಲ್ಲ. ಅದರೊಳಗೆ ತರಕಾರಿ ಇಡುವ ಬದಲು ಖಾಲಿ ಪ್ಲಾಸ್ಟಿಕ್ ಚೀಲಗಳನ್ನು ತುಂಬಲಾಗುತ್ತಿದ್ದು, ಫ್ರಿಡ್ಜ್ ಬಳಕೆಯಿಲ್ಲದ ಸ್ಥಿತಿಗೆ ತಲುಪಿದೆ. ಹಾಗೆಯೇ ವಾಟರ್ ಫಿಲ್ಟರ್‌ ಕೂಡ ನಿಷ್ಕ್ರಿಯವಾಗಿದ್ದು, ಸಾರ್ವಜನಿಕರಿಗೆ ಶುದ್ಧ ನೀರು ಲಭ್ಯವಿಲ್ಲ ಎಂಬ ಅನುಮಾನ ಮೂಡಿಸುತ್ತಿದೆ.

ಅದಕ್ಕೂ ಹೆಚ್ಚು ಗಂಭೀರವಾದ ವಿಷಯವೇನೆಂದರೆ ಅಡುಗೆ ಯಂತ್ರಗಳು ಧೂಳು ಹಿಡಿದು ನಿಲ್ಲುತ್ತಾ ಹೋಗಿದ್ದು, ಕ್ಯಾಂಟೀನ್‌ನಲ್ಲಿ ಅಲ್ಪ ಪ್ರಮಾಣದ ಅಡುಗೆಯನ್ನಷ್ಟೇ ಸಣ್ಣ ಪಾತ್ರೆಗಳಲ್ಲಿ ಮಾಡಲಾಗುತ್ತಿದೆ. ಕೆಲವೇ ನಿಮಿಷಗಳಲ್ಲಿ ‘ಊಟ ಮುಗಿಯಿತು’ ಎಂಬ ಸಲುವಾಗಿ ಬಡವರನ್ನು ಹಿಂಪಡೆಯಲಾಗುತ್ತಿದೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸರ್ಕಾರ ನಿಗದಿಪಡಿಸಿರುವ ಆಹಾರದ ಪ್ರಮಾಣಕ್ಕೆ ಅನುಗುಣವಾಗಿ ತೂಕ ಮಾಡುವ ಯಂತ್ರ ಇದ್ದರೂ, ಅದನ್ನು ಮೂಲೆಗೆ ತಳ್ಳಿರುವ ಕಾರಣ, ಆಹಾರವು ಅಂದಾಜಿನ ಮೇರೆಗೆ ನೀಡಲಾಗುತ್ತಿದೆ. ಇದರೊಂದಿಗೆ ದಿನದ ಪಂಚಿಕೆಯಲ್ಲಿ ಬಡವರ ಹೆಸರು ನೋಂದಾಯಿಸಲು ಉದ್ದೇಶಿಸಿರುವ ಪುಸ್ತಕದಲ್ಲಿಯೂ ಕೆಲವರು ಮಾತ್ರ ಸಹಿ ಮಾಡುತ್ತಿದ್ದಾರೆ, ಉಳಿದ ಸಹಿಗಳನ್ನು ಸಿಬ್ಬಂದಿಯೇ ಹಾಕುತ್ತಿರುವ ಅನುಮಾನ ವ್ಯಕ್ತವಾಗಿದೆ.

“ಇತ್ತೀಚೆಗೆ ಬೆಳಗಿನ ತಿಂಡಿ ಹಾಗೂ ಮಧ್ಯಾಹ್ನದ ಊಟ ನೀಡಲಾಗ  ಆದರೆ ಅದು ನೆಪಕ್ಕೆ ಮಾತ್ರ. ರುಚಿಯೂ ಇಲ್ಲ, ಗುಣಮಟ್ಟವೂ ಇಲ್ಲ. ಕೆಲವರಿಗೆ ಕೊಟ್ಟು, ಉಳಿದವರಿಗೆ ಮುಗಿದಿದೆಯೆಂದು ತಿರಸ್ಕರಿಸುತ್ತಾರೆ,” ಎಂದು ಕೂಲಿ ಕಾರ್ಮಿಕ ಗಂಗಪ್ಪ ವಿಷಾದ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಮನೋಜ್ ಕೂಡ “ಅಡುಗೆ ಮಾಡದೇ ಹೋದ ದಿನ ಕ್ಯಾಂಟೀನ್‌ಗೆ ಹೋಗ್ತೀನಿ. ಆದರೆ ಅಲ್ಲಿ ರುಚಿಯೂ ಇಲ್ಲ, ತರಕಾರಿಯೂ ಇಲ್ಲ. ಹೀಗೆ ಇದ್ದರೆ ಹಸಿವನ್ನು ತಣಿಸಲು ಇನ್ನು ಯಾವತ್ತಿಗೂ ಈ ಯೋಜನೆ ನೆರವಾಗದು,” ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಇಂತಹ ಪರಿಸ್ಥಿತಿಯ ಮಧ್ಯೆ, ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಬೇಕಿದ್ದರೂ ಅವರು ಅಪರೂಪಕ್ಕೆ ಮಾತ್ರ ಭೇಟಿ ನೀಡಿ, ಗುತ್ತಿಗೆದಾರರಿಗೆ ಶಹಬ್ಬಾಸ್‌ ಹೇಳಿ ಹೊರಟು ಹೋಗುತ್ತಿರುವುದರಿಂದ ಬಡವರಿಗೆ ನೆರವಾಗಬೇಕಿದ್ದ ಯೋಜನೆ ಹಣದ ಲಾಭದ ಯೋಜನೆಯಾಗಿ ಬದಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಸಾರ್ವಜನಿಕರ ಬೇಡಿಕೆಯಂತೆ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಇಂದಿರಾ ಕ್ಯಾಂಟೀನ್‌ಗಳ ಸೇವೆಯನ್ನು ಪುನಃ ಶ್ರದ್ಧೆಯಿಂದ ಪರಿಶೀಲಿಸಿ, ಬಡವರ ಆಶಯಕ್ಕೆ ತಕ್ಕಂತೆ ಗುಣಮಟ್ಟದ ಆಹಾರ ನೀಡುವಂತಹ ಕ್ರಮ ಕೈಗೊಳ್ಳಬೇಕಾಗಿದೆ. ವರದಿ ಅವಿನಾಶ್

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago