ಗಂಗಾವತಿ: ಗಂಗಾವತಿ ತಾಲ್ಲೂಕು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕ ವಿಜಯಪ್ರಸಾದ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ. ಲಿಂಗರಾಜು ಅಮಾನತುಗೊಳಿಸುವುದಾಗಿ ಆದೇಶ ನೀಡಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ವಿಜಯಪ್ರಸಾದ ಅವರು ಡಾ. ಲಿಂಗರಾಜು ಅವರೊಂದಿಗೆ ಸಭೆಯೊಳಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಸಭೆಯಲ್ಲಿ ಅವರು, ಕಾರ್ಯಕ್ರಮಗಳ ಪ್ರಗತಿ ಹಾಗೂ ಅಂಕಿ ಅಂಶಗಳನ್ನು ಸರಿಯಾಗಿ ವಿವರಿಸಲು ವಿಫಲವಾದಿದ್ದಾರೆ. ಪಟ್ಟಣ ಮಟ್ಟದಲ್ಲಿ ಮಾಹಿತಿಯನ್ನು ಸರಿಯಾಗಿ ನೀಡದೆ, ಎಲ್ಲಾ ಮಾಹಿತಿಗಾಗಿ ತಾಲೂಕು ಆರೋಗ್ಯಾಧಿಕಾರಿಗಳನ್ನು ಕೇಳಬೇಕು ಎಂದು ಹೇಳಿ, ಹಿರಿಯ ಅಧಿಕಾರಿಗಳಿಗೆ ಅವಮಾನಕಾರಿಯಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರಕರಣದಲ್ಲಿ ವಿಜಯಪ್ರಸಾದ ಅವರ ವರ್ತನೆ ಕರ್ತವ್ಯಲೋಪ, ದುರ್ನಡತೆ ಮತ್ತು ಮೇಲಾಧಿಕಾರಿಗಳಿಗೆ ಗೌರವಹೀನ ವರ್ತನೆ ತೋರಿರುವುದರಿಂದ, ಶಿಸ್ತು ಕ್ರಮವಾಗಿ ಅವರನ್ನು ಅಮಾನತುಗೊಳಿಸಲಾಗಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…