ಗಂಗಾವತಿ: ಗಂಗಾವತಿ ತಾಲ್ಲೂಕು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕ ವಿಜಯಪ್ರಸಾದ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ. ಲಿಂಗರಾಜು ಅಮಾನತುಗೊಳಿಸುವುದಾಗಿ ಆದೇಶ ನೀಡಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ವಿಜಯಪ್ರಸಾದ ಅವರು ಡಾ. ಲಿಂಗರಾಜು ಅವರೊಂದಿಗೆ ಸಭೆಯೊಳಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಸಭೆಯಲ್ಲಿ ಅವರು, ಕಾರ್ಯಕ್ರಮಗಳ ಪ್ರಗತಿ ಹಾಗೂ ಅಂಕಿ ಅಂಶಗಳನ್ನು ಸರಿಯಾಗಿ ವಿವರಿಸಲು ವಿಫಲವಾದಿದ್ದಾರೆ. ಪಟ್ಟಣ ಮಟ್ಟದಲ್ಲಿ ಮಾಹಿತಿಯನ್ನು ಸರಿಯಾಗಿ ನೀಡದೆ, ಎಲ್ಲಾ ಮಾಹಿತಿಗಾಗಿ ತಾಲೂಕು ಆರೋಗ್ಯಾಧಿಕಾರಿಗಳನ್ನು ಕೇಳಬೇಕು ಎಂದು ಹೇಳಿ, ಹಿರಿಯ ಅಧಿಕಾರಿಗಳಿಗೆ ಅವಮಾನಕಾರಿಯಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರಕರಣದಲ್ಲಿ ವಿಜಯಪ್ರಸಾದ ಅವರ ವರ್ತನೆ ಕರ್ತವ್ಯಲೋಪ, ದುರ್ನಡತೆ ಮತ್ತು ಮೇಲಾಧಿಕಾರಿಗಳಿಗೆ ಗೌರವಹೀನ ವರ್ತನೆ ತೋರಿರುವುದರಿಂದ, ಶಿಸ್ತು ಕ್ರಮವಾಗಿ ಅವರನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…