ಗಂಗಾವತಿ: ಗಂಗಾವತಿ ತಾಲ್ಲೂಕು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕ ವಿಜಯಪ್ರಸಾದ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ. ಲಿಂಗರಾಜು ಅಮಾನತುಗೊಳಿಸುವುದಾಗಿ ಆದೇಶ ನೀಡಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ವಿಜಯಪ್ರಸಾದ ಅವರು ಡಾ. ಲಿಂಗರಾಜು ಅವರೊಂದಿಗೆ ಸಭೆಯೊಳಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಸಭೆಯಲ್ಲಿ ಅವರು, ಕಾರ್ಯಕ್ರಮಗಳ ಪ್ರಗತಿ ಹಾಗೂ ಅಂಕಿ ಅಂಶಗಳನ್ನು ಸರಿಯಾಗಿ ವಿವರಿಸಲು ವಿಫಲವಾದಿದ್ದಾರೆ. ಪಟ್ಟಣ ಮಟ್ಟದಲ್ಲಿ ಮಾಹಿತಿಯನ್ನು ಸರಿಯಾಗಿ ನೀಡದೆ, ಎಲ್ಲಾ ಮಾಹಿತಿಗಾಗಿ ತಾಲೂಕು ಆರೋಗ್ಯಾಧಿಕಾರಿಗಳನ್ನು ಕೇಳಬೇಕು ಎಂದು ಹೇಳಿ, ಹಿರಿಯ ಅಧಿಕಾರಿಗಳಿಗೆ ಅವಮಾನಕಾರಿಯಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರಕರಣದಲ್ಲಿ ವಿಜಯಪ್ರಸಾದ ಅವರ ವರ್ತನೆ ಕರ್ತವ್ಯಲೋಪ, ದುರ್ನಡತೆ ಮತ್ತು ಮೇಲಾಧಿಕಾರಿಗಳಿಗೆ ಗೌರವಹೀನ ವರ್ತನೆ ತೋರಿರುವುದರಿಂದ, ಶಿಸ್ತು ಕ್ರಮವಾಗಿ ಅವರನ್ನು ಅಮಾನತುಗೊಳಿಸಲಾಗಿದೆ.
ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ…
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು…
ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ…
ನಗರಗೆರೆ ಹೋಬಳಿಯ ವಾಟದಹೊಸಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ರಾಮಚಂದ್ರಪ್ಪ (57) ಅವರು ಕಳೆದ ಮೂರು ದಿನಗಳಿಂದ…
ಜಾಗತಿಕ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ JPMorgan Chase ನಲ್ಲಿ ಗಂಭೀರ ವಿವಾದವೊಂದು ಸ್ಫೋಟಗೊಂಡಿದೆ. ಸಂಸ್ಥೆಯ ಲಿವರೇಜ್ಡ್ ಫೈನಾನ್ಸ್ ವಿಭಾಗದ…
ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…