Latest

ಸ್ವಚ್ಚತೆ ಇಲ್ಲದೇ ಬಳಲುತ್ತಿರುವ ಇಂಗಳೇಶ್ವರ ಗ್ರಾಮ!

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಇಂಗಳೇಶ್ವರ ಗ್ರಾಮದ ದುಸ್ಥಿತಿ ಇದು.ಗ್ರಾಮದಲ್ಲಿ ಕೊಳಚೆ ನೀರಿನಿಂದ ರಸ್ತೆಯೆಲ್ಲ ಚರಂಡಿಮಯವಾಗಿರುವುದು ಕಂಡು ಬಂದಿರುತ್ತದೆ.ಗ್ರಾಮದ ಚರಂಡಿಗಳ ಒಳಗಡೆ ಹಾಪ್ ಬೆಳೆದಿರುವುದು ಗ್ರಾಮ ಪಂಚಾಯಿತಿ ಪಿಡಿಓ ದೇವರನಾವದಗಿಯ ದಿವ್ಯ ನಿರ್ಲಕ್ಷ್ಯ ವಹಿಸಿರುವುದೇ ಇದಕ್ಕೆ ಮೂಲ ಕಾರಣವಾಗಿದೆ.ಭೀರಲಿಂಗೇಶ್ವರ ದೇವರ ಗುಡಿಯ ಹತ್ತಿರ ಕುಡಿಯುವ ನೀರಿನ ಟ್ಯಾಂಕ್ ಇದ್ದು.ಅದರ ಸುತ್ತ ಕೊಳಚೆಮಯ ಆಗಿರುವುದು ಹಾಗೂ ದಿನಾಲೂ ಸಂಚರಿಸಲು ತುಂಬಾ ತೊಂದರೆಯಾಗುತ್ತಿದ್ದು.ಇದರಿಂದ ಇಂಗಳೇಶ್ವರ ಗ್ರಾಮವು ಕೊಳಚೆ ನೀರಿನಿಂದ ಆವೃತವಾಗಿದೆ.ಗ್ರಾಮದಲ್ಲಿ ಕೊಳಚೆ ನೀರಿನಲ್ಲಿ ಒದ್ದಾಡೋದು ನಮ್ಮ ಕಷ್ಟ ಯಾರಿಗೆ ಹೇಳಬೇಕು ಎಂದು ಅಲ್ಲಿನ ಸಾರ್ವಜನಿಕರ ಆಕ್ರೋಶದ ಮಾತಾಗಿದೆ. ಚಿಕ್ಕ ಚಿಕ್ಕ ಮಕ್ಕಳು ವಯಸ್ಸಾದ ವೃದ್ಧರು ಈ ರಸ್ತೆ ಮೇಲೆ ಬಿದ್ದು ಗಾಯ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದಾರೆ, ಗ್ರಾಮಸ್ಥರು ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈಗಲಾದರೂ ಎಚ್ಚೆತ್ತುಕೊಂಡು ಸಂಬಂಧ ಪಟ್ಟ ಅಧಿಕಾರಿಗಳು ಇದರಿಂದ ಮುಕ್ತಿ ಕೊಡಿಸಿ ಇಲ್ಲಿನ ಜನರಿಗೆ ಅನುಕೂಲ ಮಾಡಿ ಕೊಡುತ್ತಾರಾ ಇಲ್ಲವೋ ನೋಡಬೇಕಾಗಿದೆ.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago