ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಇಂಗಳೇಶ್ವರ ಗ್ರಾಮದ ದುಸ್ಥಿತಿ ಇದು.ಗ್ರಾಮದಲ್ಲಿ ಕೊಳಚೆ ನೀರಿನಿಂದ ರಸ್ತೆಯೆಲ್ಲ ಚರಂಡಿಮಯವಾಗಿರುವುದು ಕಂಡು ಬಂದಿರುತ್ತದೆ.ಗ್ರಾಮದ ಚರಂಡಿಗಳ ಒಳಗಡೆ ಹಾಪ್ ಬೆಳೆದಿರುವುದು ಗ್ರಾಮ ಪಂಚಾಯಿತಿ ಪಿಡಿಓ ದೇವರನಾವದಗಿಯ ದಿವ್ಯ ನಿರ್ಲಕ್ಷ್ಯ ವಹಿಸಿರುವುದೇ ಇದಕ್ಕೆ ಮೂಲ ಕಾರಣವಾಗಿದೆ.ಭೀರಲಿಂಗೇಶ್ವರ ದೇವರ ಗುಡಿಯ ಹತ್ತಿರ ಕುಡಿಯುವ ನೀರಿನ ಟ್ಯಾಂಕ್ ಇದ್ದು.ಅದರ ಸುತ್ತ ಕೊಳಚೆಮಯ ಆಗಿರುವುದು ಹಾಗೂ ದಿನಾಲೂ ಸಂಚರಿಸಲು ತುಂಬಾ ತೊಂದರೆಯಾಗುತ್ತಿದ್ದು.ಇದರಿಂದ ಇಂಗಳೇಶ್ವರ ಗ್ರಾಮವು ಕೊಳಚೆ ನೀರಿನಿಂದ ಆವೃತವಾಗಿದೆ.ಗ್ರಾಮದಲ್ಲಿ ಕೊಳಚೆ ನೀರಿನಲ್ಲಿ ಒದ್ದಾಡೋದು ನಮ್ಮ ಕಷ್ಟ ಯಾರಿಗೆ ಹೇಳಬೇಕು ಎಂದು ಅಲ್ಲಿನ ಸಾರ್ವಜನಿಕರ ಆಕ್ರೋಶದ ಮಾತಾಗಿದೆ. ಚಿಕ್ಕ ಚಿಕ್ಕ ಮಕ್ಕಳು ವಯಸ್ಸಾದ ವೃದ್ಧರು ಈ ರಸ್ತೆ ಮೇಲೆ ಬಿದ್ದು ಗಾಯ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದಾರೆ, ಗ್ರಾಮಸ್ಥರು ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈಗಲಾದರೂ ಎಚ್ಚೆತ್ತುಕೊಂಡು ಸಂಬಂಧ ಪಟ್ಟ ಅಧಿಕಾರಿಗಳು ಇದರಿಂದ ಮುಕ್ತಿ ಕೊಡಿಸಿ ಇಲ್ಲಿನ ಜನರಿಗೆ ಅನುಕೂಲ ಮಾಡಿ ಕೊಡುತ್ತಾರಾ ಇಲ್ಲವೋ ನೋಡಬೇಕಾಗಿದೆ.
ವರದಿ:ಸಂಗಪ್ಪ ಚಲವಾದಿ
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…