Crime

ಆಳಂದದಲ್ಲಿ ಅತಿಥಿ ಶಿಕ್ಷಕನ ಅಮಾನವೀಯ ಕೃತ್ಯ: ಮನೆಯೊಳಗೆ ನುಗ್ಗಿ ಬಾಲಕಿಗೆ ಅತ್ಯಾಚಾರ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕನೊಬ್ಬನನ್ನು ಮಾದನಹಿಪ್ಪರಗಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 32 ವರ್ಷದ ಶಿವರಾಜ ಹಣಮಂತ ಎಂದು ಗುರುತಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿಯಂತೆ, 14 ವರ್ಷದ ಬಾಲಕಿ, 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತನ್ನ ತಾಯಿ ಯುಗಾದಿ ಹಬ್ಬದ ನಿಮಿತ್ತ ಇತರೆ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದಾಗ ಸಂತ್ರಸ್ತೆ ಬಾಲಕಿ ಮಾತ್ರ ಪರೀಕ್ಷೆಯ ಕಾರಣದಿಂದಾಗಿ ಮನೆದಲ್ಲಿಯೇ ಉಳಿದಿದ್ದಳು.

ಸಂಜೆ ವೇಳೆ, ಅಜ್ಜಿಯ ಮನೆಯಿಂದ ತಿರುಗಿ ಬಂದ ಬಾಲಕಿ ತನ್ನ ಸ್ನೇಹಿತರ ಜತೆ ಮನೆಯಲ್ಲೇ ಟಿವಿ ನೋಡುತ್ತಿದ್ದ ಸಂದರ್ಭದಲ್ಲೇ, ಇತ್ತೀಚೆಗೆ ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಅತಿಥಿ ಶಿಕ್ಷಕ ಶಿವರಾಜ, ಬಾಲಕಿಯನ್ನು ಹಿಂಬಾಲಿಸಿ ಮನೆಯೊಳಗೆ ನುಗ್ಗಿದ್ದಾನೆ. ಈ ದೃಶ್ಯ ಕಂಡ ಬಾಲಕಿಯ ಸ್ನೇಹಿತರು ಭಯಪಟ್ಟು ಸ್ಥಳದಿಂದ ಓಡಿದಿದ್ದಾರೆ.

ಬಾಲಕಿಯು ತಾಯಿ-ತಂದೆ ಇಲ್ಲದಾಗ ನಿನ್ನಗೆ ಏಕೆ ಬಂದೆ ಎಂದು ಕೇಳಿದಾಗ, ಶಿಕ್ಷಕ “ನಾನು ನಿನ್ನನ್ನು ಪ್ರೀತಿಸುತ್ತೇನೆ” ಎಂದು ನಂಬಿಸಿ, ಬೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಹೀನ ಕೃತ್ಯ ನಂತರ ಪರಾರಿಯಾಗಿದ್ದ ಶಿಕ್ಷಕನನ್ನು ಪೊಲೀಸರು ಶೋಧಿಸಿ ಬಂಧಿಸಿದ್ದಾರೆ.

ಅತ್ಯಾಚಾರದಿಂದ ಪ್ರಜ್ಞೆ ತಪ್ಪಿದ ಬಾಲಕಿಯನ್ನು ಪೋಷಕರು ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಪ್ರಜ್ಞೆ ಗೆತ್ತಿಕೊಂಡ ನಂತರ ಆತ ಮಾಡಿದ ದುಷ್ಕೃತ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ.

ಮಾಹಿತಿ ಪಡೆದುಕೊಂಡ ಪೊಲೀಸರ ತಂಡವು ಪ್ರಕರಣ ದಾಖಲಿಸಿಕೊಂಡು, ಪೊಕ್ಸೊ (POCSO) ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಜರುಗಿಸಿದ್ದು, ತನಿಖೆ ಮುಂದುವರಿಸುತ್ತಿದ್ದಾರೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 hour ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 hour ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

2 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago