Crime

ಆಳಂದದಲ್ಲಿ ಅತಿಥಿ ಶಿಕ್ಷಕನ ಅಮಾನವೀಯ ಕೃತ್ಯ: ಮನೆಯೊಳಗೆ ನುಗ್ಗಿ ಬಾಲಕಿಗೆ ಅತ್ಯಾಚಾರ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕನೊಬ್ಬನನ್ನು ಮಾದನಹಿಪ್ಪರಗಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 32 ವರ್ಷದ ಶಿವರಾಜ ಹಣಮಂತ ಎಂದು ಗುರುತಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿಯಂತೆ, 14 ವರ್ಷದ ಬಾಲಕಿ, 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತನ್ನ ತಾಯಿ ಯುಗಾದಿ ಹಬ್ಬದ ನಿಮಿತ್ತ ಇತರೆ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದಾಗ ಸಂತ್ರಸ್ತೆ ಬಾಲಕಿ ಮಾತ್ರ ಪರೀಕ್ಷೆಯ ಕಾರಣದಿಂದಾಗಿ ಮನೆದಲ್ಲಿಯೇ ಉಳಿದಿದ್ದಳು.

ಸಂಜೆ ವೇಳೆ, ಅಜ್ಜಿಯ ಮನೆಯಿಂದ ತಿರುಗಿ ಬಂದ ಬಾಲಕಿ ತನ್ನ ಸ್ನೇಹಿತರ ಜತೆ ಮನೆಯಲ್ಲೇ ಟಿವಿ ನೋಡುತ್ತಿದ್ದ ಸಂದರ್ಭದಲ್ಲೇ, ಇತ್ತೀಚೆಗೆ ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಅತಿಥಿ ಶಿಕ್ಷಕ ಶಿವರಾಜ, ಬಾಲಕಿಯನ್ನು ಹಿಂಬಾಲಿಸಿ ಮನೆಯೊಳಗೆ ನುಗ್ಗಿದ್ದಾನೆ. ಈ ದೃಶ್ಯ ಕಂಡ ಬಾಲಕಿಯ ಸ್ನೇಹಿತರು ಭಯಪಟ್ಟು ಸ್ಥಳದಿಂದ ಓಡಿದಿದ್ದಾರೆ.

ಬಾಲಕಿಯು ತಾಯಿ-ತಂದೆ ಇಲ್ಲದಾಗ ನಿನ್ನಗೆ ಏಕೆ ಬಂದೆ ಎಂದು ಕೇಳಿದಾಗ, ಶಿಕ್ಷಕ “ನಾನು ನಿನ್ನನ್ನು ಪ್ರೀತಿಸುತ್ತೇನೆ” ಎಂದು ನಂಬಿಸಿ, ಬೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಹೀನ ಕೃತ್ಯ ನಂತರ ಪರಾರಿಯಾಗಿದ್ದ ಶಿಕ್ಷಕನನ್ನು ಪೊಲೀಸರು ಶೋಧಿಸಿ ಬಂಧಿಸಿದ್ದಾರೆ.

ಅತ್ಯಾಚಾರದಿಂದ ಪ್ರಜ್ಞೆ ತಪ್ಪಿದ ಬಾಲಕಿಯನ್ನು ಪೋಷಕರು ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಪ್ರಜ್ಞೆ ಗೆತ್ತಿಕೊಂಡ ನಂತರ ಆತ ಮಾಡಿದ ದುಷ್ಕೃತ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ.

ಮಾಹಿತಿ ಪಡೆದುಕೊಂಡ ಪೊಲೀಸರ ತಂಡವು ಪ್ರಕರಣ ದಾಖಲಿಸಿಕೊಂಡು, ಪೊಕ್ಸೊ (POCSO) ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಜರುಗಿಸಿದ್ದು, ತನಿಖೆ ಮುಂದುವರಿಸುತ್ತಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

8 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

15 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

15 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago