Crime

ಆಳಂದದಲ್ಲಿ ಅತಿಥಿ ಶಿಕ್ಷಕನ ಅಮಾನವೀಯ ಕೃತ್ಯ: ಮನೆಯೊಳಗೆ ನುಗ್ಗಿ ಬಾಲಕಿಗೆ ಅತ್ಯಾಚಾರ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕನೊಬ್ಬನನ್ನು ಮಾದನಹಿಪ್ಪರಗಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 32 ವರ್ಷದ ಶಿವರಾಜ ಹಣಮಂತ ಎಂದು ಗುರುತಿಸಲಾಗಿದೆ.

ಪೊಲೀಸರು ನೀಡಿದ ಮಾಹಿತಿಯಂತೆ, 14 ವರ್ಷದ ಬಾಲಕಿ, 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತನ್ನ ತಾಯಿ ಯುಗಾದಿ ಹಬ್ಬದ ನಿಮಿತ್ತ ಇತರೆ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದಾಗ ಸಂತ್ರಸ್ತೆ ಬಾಲಕಿ ಮಾತ್ರ ಪರೀಕ್ಷೆಯ ಕಾರಣದಿಂದಾಗಿ ಮನೆದಲ್ಲಿಯೇ ಉಳಿದಿದ್ದಳು.

ಸಂಜೆ ವೇಳೆ, ಅಜ್ಜಿಯ ಮನೆಯಿಂದ ತಿರುಗಿ ಬಂದ ಬಾಲಕಿ ತನ್ನ ಸ್ನೇಹಿತರ ಜತೆ ಮನೆಯಲ್ಲೇ ಟಿವಿ ನೋಡುತ್ತಿದ್ದ ಸಂದರ್ಭದಲ್ಲೇ, ಇತ್ತೀಚೆಗೆ ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಅತಿಥಿ ಶಿಕ್ಷಕ ಶಿವರಾಜ, ಬಾಲಕಿಯನ್ನು ಹಿಂಬಾಲಿಸಿ ಮನೆಯೊಳಗೆ ನುಗ್ಗಿದ್ದಾನೆ. ಈ ದೃಶ್ಯ ಕಂಡ ಬಾಲಕಿಯ ಸ್ನೇಹಿತರು ಭಯಪಟ್ಟು ಸ್ಥಳದಿಂದ ಓಡಿದಿದ್ದಾರೆ.

ಬಾಲಕಿಯು ತಾಯಿ-ತಂದೆ ಇಲ್ಲದಾಗ ನಿನ್ನಗೆ ಏಕೆ ಬಂದೆ ಎಂದು ಕೇಳಿದಾಗ, ಶಿಕ್ಷಕ “ನಾನು ನಿನ್ನನ್ನು ಪ್ರೀತಿಸುತ್ತೇನೆ” ಎಂದು ನಂಬಿಸಿ, ಬೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಹೀನ ಕೃತ್ಯ ನಂತರ ಪರಾರಿಯಾಗಿದ್ದ ಶಿಕ್ಷಕನನ್ನು ಪೊಲೀಸರು ಶೋಧಿಸಿ ಬಂಧಿಸಿದ್ದಾರೆ.

ಅತ್ಯಾಚಾರದಿಂದ ಪ್ರಜ್ಞೆ ತಪ್ಪಿದ ಬಾಲಕಿಯನ್ನು ಪೋಷಕರು ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಪ್ರಜ್ಞೆ ಗೆತ್ತಿಕೊಂಡ ನಂತರ ಆತ ಮಾಡಿದ ದುಷ್ಕೃತ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ.

ಮಾಹಿತಿ ಪಡೆದುಕೊಂಡ ಪೊಲೀಸರ ತಂಡವು ಪ್ರಕರಣ ದಾಖಲಿಸಿಕೊಂಡು, ಪೊಕ್ಸೊ (POCSO) ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಜರುಗಿಸಿದ್ದು, ತನಿಖೆ ಮುಂದುವರಿಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

6 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

6 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

6 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

6 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago