Latest

ಶಿಶು ಆರೈಕೆ ಕೇಂದ್ರದಲ್ಲಿ ಅಮಾನವೀಯ ದುರಂತ – ಬಿಸಿ ನೀರು ಸುರಿದ ಪರಿಣಾಮ ಮಗುವಿಗೆ ಗಂಭೀರ ಗಾಯ

ಚಿಕ್ಕಮಗಳೂರು, ಜುಲೈ 19: ಜಿಲ್ಲೆಯಲ್ಲಿ ಮಾನವೀಯತೆಗೂ ಮಿತಿ ಇರುವ ಭಯಾನಕ ಘಟನೆ ನಡೆದಿದೆ. ಗಾಂಧಿನಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ಕೆಲಸ ಮಾಡುವ ಶಿಶು ಆರೈಕಾ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಒಂದು ವರ್ಷ ಮೂರೂ ತಿಂಗಳ ಹೆಣ್ಣು ಮಗು ಗಂಭೀರವಾಗಿ ಗಾಯಗೊಂಡಿರುವ ದುರಂತ ನಡೆದಿದೆ.

ಘಟನೆ ಜುಲೈ 9ರಂದು ನಡೆದಿದ್ದು, ಮಲ ವಿಸರ್ಜನೆ ಮಾಡಿದ ಮಗುವನ್ನು ಶುದ್ಧಮಾಡುವ ಸಂದರ್ಭ ಬಿಸಿ ನೀರು ಸುರಿದ ಪರಿಣಾಮವಾಗಿ ಮಗುವಿನ ಸೊಂಟದ ಕೆಳಭಾಗ ಸಂಪೂರ್ಣ ಸುಟ್ಟು ಹೋಗಿದೆ. ಈ ಅನಾಥ ಮಗು ದತ್ತು ಪಡೆಯಲು ಪೋಷಕರು ಸಿದ್ಧತೆ ನಡೆಸುತ್ತಿದ್ದರು. ಆದರೆ ಆಸ್ಪತ್ರೆ ಬೆಡ್‌ನಲ್ಲಿ ನರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅನಾಥ ಮತ್ತು ತ್ಯಜಿತ ಮಕ್ಕಳ ಆರೈಕೆ ಹಾಗೂ ಸುರಕ್ಷತೆಗಾಗಿ ಸ್ಥಾಪಿಸಲಾಗಿದೆ. ಆದರೆ ಇಲ್ಲಿನ ಸಿಬ್ಬಂದಿಯ ಅಸಡ್ಡೆ ಮತ್ತು ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಘಟನೆಯಾದ ಬಳಿಕ ವಿಷಯವನ್ನು ಮೇಲಧಿಕಾರಿಗಳಿಗೆ ಮುಚ್ಚಿಹಾಕಲು ಸಿಬ್ಬಂದಿ ಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಇನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ತೀವ್ರ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ಸಾಮಾಜಿಕ ಮತ್ತು ಮಕ್ಕಳ ಹಕ್ಕು ರಕ್ಷಣಾ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲಾ ಮಕ್ಕಳ‌ ರಕ್ಷಣಾ ಘಟಕ ಹಾಗೂ ಸಂಬಂಧಿತ ಇಲಾಖೆಗಳು ಘಟನೆಯ ಬಗ್ಗೆ ತನಿಖೆ ಆರಂಭಿಸಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ನಿರ್ಲಕ್ಷ್ಯ ಪ್ರದರ್ಶಿಸಿದ ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

57 minutes ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

17 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

23 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

23 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago