ಕಲಬುರಗಿ: ಸೇಡಂ ತಾಲೂಕಿನ ಕೋಡ್ಲಾ ಸಮೀಪದ ಸಿಮೆಂಟ್ ಕಾರ್ಖಾನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಿಹಾರ ಮೂಲದ ಕಾರ್ಮಿಕನ ಮೃತದೇಹವನ್ನು ಅಮಾನವೀಯ ರೀತಿಯಲ್ಲಿ ಎಳೆಯುವುದಾಗಿ ಕಂಡಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಯ ಆರು ಕಾರ್ಮಿಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಘಟನೆ ವಿವರ:
ಚಂದನ್ಸಿಂಗ್ ಎಂಬ ಕಾರ್ಮಿಕ ರಕ್ತದೊತ್ತಡ ಹೆಚ್ಚಾದ ಪರಿಣಾಮ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದರು. ಆದರೆ ಸಹೋದ್ಯೋಗಿಗಳು ಅಗತ್ಯ ವೈದ್ಯಕೀಯ ಸಹಾಯ ಒದಗಿಸದೆ, ಮೃತದೇಹವನ್ನು ನಿರ್ಲಕ್ಷ್ಯಪೂರ್ಣವಾಗಿ ಎಳೆಯುವ ರೀತಿಯಲ್ಲಿ ಸ್ಥಳಾಂತರಿಸಿದರು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವೇ ಗಂಟೆಗಳಲ್ಲೇ ವೈರಲ್ ಆಗಿತು.
ವೀಡಿಯೋ ಹರಿದಾಡಿದ ಬೆನ್ನಲ್ಲೇ, ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಘಟನೆಯ ಬಗ್ಗೆ ಕಿಡಿಕಾರಿದರು. ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಲು ಸೂಚಿಸಿದರು.
ಕಾನೂನು ಕ್ರಮ:
ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಆರು ಕಾರ್ಮಿಕರಾದ ಅಜಯ್, ಹೈದರ್ ಅಲಿ, ಹರಿಂದರ್, ರಮೇಶ್ಚಂದ್ರ, ರವಿಶಂಕರ್ ಮತ್ತು ಅಖಿಲೇಶ್ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆಯು ಕಾರ್ಮಿಕರ ಸುರಕ್ಷತೆ ಮತ್ತು ಮಾನವೀಯತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಘಟನೆಯನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…