Latest

ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕನ ಅಮಾನವೀಯ ಮರಣ: ಆರು ಕಾರ್ಮಿಕರ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: ಸೇಡಂ ತಾಲೂಕಿನ ಕೋಡ್ಲಾ ಸಮೀಪದ ಸಿಮೆಂಟ್ ಕಾರ್ಖಾನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಿಹಾರ ಮೂಲದ ಕಾರ್ಮಿಕನ ಮೃತದೇಹವನ್ನು ಅಮಾನವೀಯ ರೀತಿಯಲ್ಲಿ ಎಳೆಯುವುದಾಗಿ ಕಂಡಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಯ ಆರು ಕಾರ್ಮಿಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆ ವಿವರ:
ಚಂದನ್ಸಿಂಗ್ ಎಂಬ ಕಾರ್ಮಿಕ ರಕ್ತದೊತ್ತಡ ಹೆಚ್ಚಾದ ಪರಿಣಾಮ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದರು. ಆದರೆ ಸಹೋದ್ಯೋಗಿಗಳು ಅಗತ್ಯ ವೈದ್ಯಕೀಯ ಸಹಾಯ ಒದಗಿಸದೆ, ಮೃತದೇಹವನ್ನು ನಿರ್ಲಕ್ಷ್ಯಪೂರ್ಣವಾಗಿ ಎಳೆಯುವ ರೀತಿಯಲ್ಲಿ ಸ್ಥಳಾಂತರಿಸಿದರು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವೇ ಗಂಟೆಗಳಲ್ಲೇ ವೈರಲ್ ಆಗಿತು.

ವೀಡಿಯೋ  ಹರಿದಾಡಿದ ಬೆನ್ನಲ್ಲೇ, ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಘಟನೆಯ ಬಗ್ಗೆ ಕಿಡಿಕಾರಿದರು. ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಲು ಸೂಚಿಸಿದರು.

ಕಾನೂನು ಕ್ರಮ:
ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಆರು ಕಾರ್ಮಿಕರಾದ ಅಜಯ್, ಹೈದರ್ ಅಲಿ, ಹರಿಂದರ್, ರಮೇಶ್ಚಂದ್ರ, ರವಿಶಂಕರ್ ಮತ್ತು ಅಖಿಲೇಶ್ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.

ಈ ಘಟನೆಯು ಕಾರ್ಮಿಕರ ಸುರಕ್ಷತೆ ಮತ್ತು ಮಾನವೀಯತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಘಟನೆಯನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.

nazeer ahamad

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

2 hours ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

2 hours ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

2 hours ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

3 hours ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

1 day ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

1 day ago