Latest

ಹರಿದ್ವಾರದಲ್ಲಿ ಅಮಾನವೀಯ ಘಟನೆ: ತಾಯಿಯೇ ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ದಾರಿ ಮಾಡಿಕೊಟ್ ಹೀನ ಕೃತ್ಯ!

ಹರಿದ್ವಾರ: ಉತ್ತರಾಖಂಡದ ಹರಿದ್ವಾರದಲ್ಲಿ ಜಾಗೃತಿ ಮೂಡಿಸುವಂತಹ ಭೀಕರ ಘಟನೆ. ಕೇವಲ 13 ವರ್ಷದ ಮಗಳು ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ತಾನೇ ಅವಕಾಶ ಮಾಡಿಕೊಟ್ಟಿದ್ದ ತಾಯಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತ ಮಹಿಳೆ ಹಿಂದಿನ ಭಜಪದ (ಬಿಜೆಪಿ) ಸ್ಥಳೀಯ ನಾಯಕಿಯಾಗಿದ್ದಳು. ತನ್ಮೂಲಕ ಈ ಘಟನೆ ರಾಜಕೀಯ ತಿರುವು ಪಡೆಯುವ ಸಾಧ್ಯತೆಯೂ ಇದ್ದು, ಬಿಜೆಪಿ ಜಿಲ್ಲಾಧಿಕಾರಿಗಳು ಕೂಡ ತಕ್ಷಣ ಸ್ಪಷ್ಟನೆ ನೀಡಿದ್ದು, ಕಳೆದ ವರ್ಷವೇ ಆಕೆಯನ್ನು ಪಕ್ಷದಿಂದ ದೂರವಿಡಲಾಗಿದೆ ಎಂದಿದ್ದಾರೆ.

ಪೊಲೀಸರು ಮಹಿಳೆಯ ಪ್ರಿಯಕರ ಸುಮಿತ್ ಪತ್ವಾಲ್ ಎಂಬಾತನನ್ನೂ ಬಂಧಿಸಿದ್ದು, ಇತರ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

ಈ ದುಷ್ಕೃತ್ಯದ ವಿರುದ್ಧ ಧೈರ್ಯ ತೋರಿ ಪೋಲಿಸರಿಗೆ ದೂರು ನೀಡಿದವರು ಮಗಳೇ. ತಾಯಿಯ ಪ್ರಿಯಕರ ಮತ್ತು ಇತರರಿಂದ ದೌರ್ಜನ್ಯಕ್ಕೊಳಗಾಗುತ್ತಿದ್ದೇನೆ ಎಂಬುದನ್ನು ಆಕೆ ತನ್ನ ತಂದೆಗೆ ಬಾಯ್ಬಿಟ್ಟಿದ್ದಾಳೆ. ತಕ್ಷಣ ಎಚ್ಚೆತ್ತ ತಂದೆ, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹರಿದ್ವಾರ ಎಸ್‌ಎಸ್‌ಪಿ ಪರಮೇಂದ್ರ ದೋವಲ್ ಹೇಳಿರುವಂತೆ, ಬಾಲಕಿಯ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹೇಳಿಕೆಗಳು ಸತ್ಯವೆಂದು ಸ್ಪಷ್ಟವಾಗಿದೆ. ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದಿದ್ದಾರೆ.

ಬಂಧಿತ ತಾಯಿ ಕೆಲ ವರ್ಷಗಳ ಹಿಂದೆ ಪತಿಯೊಂದಿಗೆ ಬೇರ್ಪಟ್ಟಿದ್ದು, ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಮಗಳು ತನ್ನ ತಂದೆಯ ಬಳಿ ವಾಸವಿದ್ದರೂ, ಕೆಲವೊಮ್ಮೆ ತಾಯಿಯ ಮನೆಗೆ ಹೋಗುತ್ತಿದ್ದ ಸಂದರ್ಭಗಳಲ್ಲಿ ಈ ದೌರ್ಜನ್ಯ ನಡೆದಿರುವ ಸಾಧ್ಯತೆಯಿದೆ.

ಈ ಘಟನೆಯ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ, ತಾಯಂದಿರ ನೈತಿಕ ಹೊಣೆಗಾರಿಕೆ ಮತ್ತು ಸಮಾಜದ ನೈತಿಕ ಕುಸಿತದ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ.

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಗಳನ್ನು ಬಂಧಿಸಿ ತಕ್ಷಣ ಕ್ರಮ ಕೈಗೊಂಡಿರುವ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ. ಈಗ ಎಲ್ಲಾ ದೃಷ್ಟಿ ನ್ಯಾಯಾಲಯದ ಮುಂದಿನ ನಿರ್ಧಾರಗಳತ್ತ ಮೂಡಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago