Latest

ಗಾಢ ನಿದ್ರೆಯಲ್ಲಿದ್ದ ರೈಲ್ವೆ ಇಲಾಖೆಗೆ ರೈಲು ತಡೆ ಪ್ರತಿಭಟನೆಯ ಚುಚ್ಚುಮದ್ದು; ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಬೆಂಗಳೂರು ಡಿ.ಆರ್.ಎಂ.

ಕೋಲಾರ: ವಿಶೇಷ ಸವಲತ್ತಿನ ಎ.ಸಿ ಕೋಚ್ ಹತ್ತಿ ಪ್ರತಿಭಟನೆ ನಡೆದ ಸ್ಥಳಕ್ಕೆ ದೌಡಾಯಿಸಿದ ಡಿ.ಆರ್.ಎಂ ನೆನ್ನೆ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ನಡೆಸಿದ ರೈಲು ತಡೆದು ಪ್ರತಿಭಟನೆಯ ವಿವರ ಪಡೆಯಲು ಮತ್ತು ಮಾಧ್ಯಮಗಳಿಗೆ ಪತ್ರಿಕಾ ಗೋಷ್ಠಿ ನೀಡಲು ಆಗಮಿಸಿದ ಬೆಂಗಳೂರು ಡಿವಿಜನಲ್ ರೈಲ್ವೆ ಮ್ಯಾನೇಜರ್ (ಡಿ.ಆರ್.ಎಂ.) ಅಮಿತೇಶ್ ಕುಮಾರ್ ಸಿನ್ಹಾ.

ಗಾಢ ನಿದ್ರೆಯಲ್ಲಿ ಮಲಗಿದ್ದ ಬೆಂಗಳೂರು ರೈಲ್ವೆ ಅಧಿಕರಿಗಳು ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ನೆನ್ನೆ ಜ. 29 ರಂದು ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ದೈನಂದಿನ ಪ್ರಯಾಣಿಕರು ರೈಲು ತಡೆಯುವ ಮೂಲಕ ನಡೆಸಿದ ಪ್ರತಿಭಟನೆಯಿಂದ ಅಧಿಕಾರಿಗಳಿಗೆ ಬಿಸಿ ಮುಟ್ಟಿದೆ ತಮ್ಮ ಗಾಢ ನಿದ್ರೆಯಿಂದ ಎಚ್ಚೆತ್ತುಕೊಂಡು ಕೂಡಲೇ ಮಾಧ್ಯಮ ಸುದ್ದಿಗೋಷ್ಠಿ ನಡೆಸಲು ದೌಡಾಯಿಸಿದ ಡಿ ಆರ್ ಎಂ ಮತ್ತು ರೈಲ್ವೆ ಅಧಿಕಾರಿಗಳು.

ಪ್ರತಿಭಟನೆಗೆ ಸ್ಪಂದಿಸಿ ಮುಂದೆ ಆಗಬಹುದಾದ ದೊಡ್ಡ ಅನಾಹುತದಿಂದ ಪಾರಾಗುವ ಭರವಸೆ ನೀಡಿ ಕೂಡಲೇ ಜನರ ಹಿತ ದೃಷ್ಟಿಯಿಂದ ಹೆಚ್ಚುವರಿ ಕೋಚ್ ಗಳನ್ನು ಅಂತವಾಗಿ ಅಳವಡಿಸಲಾಗುವುದು ಎಂದು ಡಿ.ಆರ್.ಎಂ. ಅಮಿತೇಶ್ ಕುಮಾರ್ ಸಿನ್ಹಾ ತಿಳಿಸಿದರು.

ಈ ವೇಳೆ ಮಧ್ಯಮ ಸುದ್ದಿಗೋಷ್ಠಿ ನಡೆಸಿದ ಕೋಲಾರ ಸಂಸಾರದ ಎಂ. ಮಲ್ಲೇಶ್ ಬಾಬು ಮತ್ತು ಡಿವಿಜನಲ್ ರೈಲ್ವೆ ಮ್ಯಾನೇಜರ್ (ಡಿ.ಆರ್.ಎಂ.) ಅಮಿತೇಶ್ ಕುಮಾರ್ ಸಿನ್ಹಾ ರವರು ಜ. 30 ರಿಂದ ಹೆಚ್ಚುವರಿ ಬೋಗಿ ಅಳವಡಿಸ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಹಲವು ರೈಲ್ವೆ ಭೋಗಿಗಳು ದುರಸ್ತಿ ಕಾರ್ಯದಲ್ಲಿರುವ ಕಾರಣ 12 ರಿಂದ 8 ಭೋಗಿಗಳಿಗೆ ಇಳಿಸಬೇಕಾದ ಪರಿಸ್ಥಿ ಉಂಟಾಯಿತು, ಇದರ ಪರಿಣಾಮ ಪ್ರಯಾಣಿಕರಿಗೆ ಭಾರಿ ತೊಂದರೆ ಉಂಟಾಗಿದ್ದು ಕಂಡುಬಂದಿದೆ, ತಕ್ಷಣ 8 ಭೋಗಿಗಳಿಗೆ 4 ಭೋಗಿಗಳು ಜೋಡಿಸಿ ರೈಲನ್ನು 12 ಬುಗಿಗಳಾಗಿ ಜ. 30 ರಿಂದಲೆ ಜಾರಿಗೆ ತರುತ್ತೇವೆ ಮತ್ತು ಒಂದು ತಿಂಗಳ ಒಳಗಾಗಿ ಇದನ್ನು ಮತ್ತೊಮ್ಮೆ ನಾಲ್ಕು ಹೆಚ್ಚುವರಿ ಭುಗಿಗಳನ್ನು ಜೋಡಿಸಿ ಒಟ್ಟು 16 ಭೋಗಿಗಳಾಗಿ ಎಂದಿನಂತೆ ಮಾಡಲಾಗುವುದು ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವುದು ಎಂದು ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ಸಂಸದರು ಮತ್ತು ಡಿ.ಆರ್.ಎಂ ಭರವಸೆ ನೀಡಿದ್ದಾರೆ.

ಇದೇ ವೇಳೆ ಮರಿಕುಪ್ಪಂ (ಕೆಜಿಎಫ್) ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಆಂಧ್ರಪ್ರದೇಶದ ಕುಪ್ಪಂ ಮಾರ್ಗಕ್ಕೆ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಹಳಿ ಪರಿಶೀಲನೆ ನಡೆಸಿ ಬಂಗಾರಪೇಟೆ ಸುತ್ತಲಿನ ಬೂದಿಕೋಟೆ ಮುಖ್ಯರಸ್ತೆ, ಬಂಗಾರಪೇಟೆ – ಕೋಲಾರ ಮುಖ್ಯರಸ್ತೆಯಲ್ಲಿ ಎಸ್ ಎನ್ ರೆಸಾರ್ಟ್ ಹತ್ತಿರ ಮತ್ತು ಸ್ಯಾನಿಟೋರಿಯಂ ಹತ್ತಿರ ಮತ್ತು ಕಾಮಸಮುದ್ರ ರಸ್ತೆಯಲ್ಲಿ ನಡೆಯುವ ರೈಲ್ವೆ ಓವರ್ ಬ್ರಿಜ್ (ಆರ್.ಒ.ಬಿ) ಮತ್ತು ರೈಲ್ವೆ ಅಂಡರ್ ಬ್ರಿಡ್ಜ್ (ಆರ್. ಯು. ಬಿ) ಕಾಮಗಾರಿಗಳ ಆದಷ್ಟು ಬೇಗ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ವರದಿ: ರೋಷನ್ ಜಮೀರ್.

nazeer ahamad

Recent Posts

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

37 minutes ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

39 minutes ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

40 minutes ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

19 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

24 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

24 hours ago