ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ
ಧಾರವಾಡ: ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಿರುವ ಶೂಗಳ ಗುಣಮಟ್ಟದ ಕುರಿತು ಶಿಕ್ಷಕರು ಮತ್ತು ಪೋಷಕರು ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಗೊಂಗಡಿಕೊಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 22 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ 10 ಗಂಡು ಮಕ್ಕಳು ಹಾಗೂ 12 ಹೆಣ್ಣು ಮಕ್ಕಳು ಇದ್ದಾರೆ. ಕಳೆದ 2025-26ನೇ ಸಾಲಿನಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ತಲಾ 265 ರೂ. ಬೆಲೆಯ ಶೂಗಳನ್ನು ವಿತರಿಸಲಾಗಿತ್ತು. ಆ ಶೂಗಳು ಒಂದು ವರ್ಷ ಕಳೆದರೂ ಉತ್ತಮ ಸ್ಥಿತಿಯಲ್ಲಿ ಬಾಳಿಕೆ ಬರುತ್ತಿವೆ ಎಂದು ಶಿಕ್ಷಕರೊಬ್ಬರು ತಿಳಿಸಿದ್ದಾರೆ.
ಆದರೆ, ಪ್ರಸಕ್ತ ಸಾಲಿನಲ್ಲಿ ಇತ್ತೀಚೆಗೆ ಸರ್ಕಾರದಿಂದ ವಿತರಿಸಲಾಗಿರುವ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕಳೆದ ವರ್ಷ ವಿತರಿಸಿದ್ದ ಶೂಗಳಿಗೆ ಹೋಲಿಸಿದರೆ ಈ ಬಾರಿ ನೀಡಿರುವ ಶೂಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಕೆಲ ಶಿಕ್ಷಕರು ಹಾಗೂ ಪೋಷಕರು ಆರೋಪಿಸಿದ್ದಾರೆ.
250 ರೂ.ಗೂ ಅಧಿಕ ವೆಚ್ಚ, 100 ರೂ. ಮೌಲ್ಯವೂ ಇಲ್ಲವೇ?
ಸುಮಾರು ಒಂದು ತಿಂಗಳ ಹಿಂದೆ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಶೂಗಳಿಗೆ 250 ರೂ.ಗೂ ಅಧಿಕ ಹಣ ವೆಚ್ಚ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ, ವಿತರಿಸಲಾದ ಶೂಗಳ ನೈಜ ಮೌಲ್ಯ 100 ರೂ.ಗೂ ಸಹ ಬಾಳುವುದಿಲ್ಲ ಎಂದು ಕೆಲ ಶಿಕ್ಷಕರು ಮತ್ತು ಪೋಷಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ 265 ರೂ. ಬೆಲೆಯ ಶೂಗಳು ದೀರ್ಘಕಾಲ ಬಾಳಿಕೆ ಬಂದಿದ್ದರೆ, ಈ ಬಾರಿ ವಿತರಿಸಿರುವ ಶೂಗಳ ಗುಣಮಟ್ಟದ ಬಗ್ಗೆ ಪ್ರಶ್ನೆಗಳು ಮೂಡಿರುವುದು ಗಮನಾರ್ಹವಾಗಿದೆ. ವಿದ್ಯಾರ್ಥಿಗಳ ಬಳಕೆಗೆ ನೀಡುವ ಶೂಗಳ ಗುಣಮಟ್ಟವನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುವ ಶೂಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಿತರಿಸಿರುವ ಶೂಗಳ ಗುಣಮಟ್ಟದ ಕುರಿತು ಸಂಬಂಧಪಟ್ಟ ಇಲಾಖೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್ಗಳ…
ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ…
ಬಂಗಾರಪೇಟೆ: ಗಣೇಶ ಮೂರ್ತಿ ವಿಸರ್ಜನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 18 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ…