ಇತ್ತೀಚಿನ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯ ಕೇಶ್ವಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಭುವನೇಶ್ವರಿ ಜ್ಯೂವೆಲರಿ ಶಾಪ್ ನಲ್ಲಿ ಅಂದಾಜು ಒಂದು ಕೋಟಿಗಿಂತ ಬೆಲೆ ಬಾಳುವ ಬಂಗಾರ ಮತ್ತು ಬೆಳ್ಳಿ ಆಭರಣ ಕಳ್ಳತನವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೇರೆ ರಾಜ್ಯಗಳಲ್ಲಿಯೂ ಹೀಗೆ ದರೋಡೆ ಮಾಡುತ್ತಿದ್ದ ದರೋಡೆಕೋರನಾದ ಹೈದರಾಬಾದ್ ನಿವಾಸಿ ಫರ್ಹಾನ್ ಶೇಖ್ ಎಂಬ ವ್ಯಕ್ತಿಯನ್ನು ಕೇಶ್ವಾಪೂರ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು
ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಪ್ರಕರಣದ ಅಂತರ್ಜಾ ಆರೋಪಿಯನ್ನು ಬಂಧಿಸಿರುವಂತಹ ಪೊಲೀಸರು ಉಳಿದಂತೆ ಇತರೆ ಆರೋಪಿಗಳನ್ನು ಬಂಧನ ಮಾಡಲು ಈ ವ್ಯಕ್ತಿಯನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ತಾರಿಹಾಳ ಹಾಳ ಬ್ರಿಜ್ ಬಳಿ ಹೋಗುತ್ತಿದ್ದಂತೆ ಫರ್ಹಾನ್ ಶೇಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು ಕೂಡಲೇ ಕೇಶ್ವಾಪೂರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಕವಿತಾ ಮಾಡಗ್ಯಾಳ ಎರಡು ಸುತ್ತು ಗುಂಡು ಹಾರಿಸಿ ಫರ್ಹಾನ್ ಶೇಕ್ ನ ಕಾಲಿಗೆ ಶೂಟ್ ಔಟ್ ಮಾಡಿದ್ದಾರೆ.
ಕವಿತಾ ಶೂಟ್ ಔಟ್ ಮಾಡಿದ ಗುಂಡು ದರೋಡೆಕೋರನ ಕಾಲಿಗೆ ಬಿದ್ದಿದ್ದು ಕೂಡಲೇ ಈತನನ್ನು ಬಂಧಿಸಿದ್ದಾರೆ, ಈ ಶೂಟೌಟ್ ಪ್ರಕರಣ ಹುಬ್ಬಳ್ಳಿಯ ಗಾಮನಗಟ್ಟಿ ಹೋರವಲಯದಲ್ಲಿ ನಡೆದಿದೆ.
ಇಲ್ಲಿ ಬಂದಿತನಾದ ದರೋಡೆಕೋರ ಫರ್ಹಾನ್ ಶೇಕ್ ಹೈದರಾಬಾದ್ ಮೂಲದವನಾಗಿದ್ದು ವಿವಿಧ ರಾಜ್ಯದ ಪೊಲೀಸರಿಗೆ ಬೇಕಾಗಿರುವ ಅಂತರ್ ರಾಜ್ಯ ಕುಖ್ಯಾತ ದರೋಡೆಕೋರ ಇವನು ಎಂಬ ಸಂಶಯ ವ್ಯಕ್ತವಾಗಿದೆ. ಈ ಕಾರ್ಯಚರಣೆಯಲ್ಲಿ ಕೇಶ್ವಾಪೂರ್ ಪೊಲೀಸ್ ಠಾಣೆಯ ಪೋಲಿಸ್ ಇನ್ಸಪೆಕ್ಟರ್ ಕವಿತಾ ಹಾಗೂ ಪೋಲಿಸ್ ಪೇದೆಗಳಾದ ಮಹೇಶ್ ಮತ್ತು ಸುಜಾತ ಎಂಬ ಮೂವರಿಗೆ ಗಾಯಗಳಾಗಿದ್ದು ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ವರದಿ: ಶಿವು ಹುಬ್ಬಳ್ಳಿ
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…