Categories: CrimeLatest

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14 ವರ್ಷದ ಬಾಲಕನನ್ನು ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಮಹಿಳೆಯೊಬ್ಬಳು ಬಲೆ ಬೀಸಿ, ಬಳಿಕ ಅಪಹರಣಕ್ಕೆ ಕಾರಣವಾದ ಘಟನೆ ಇದೀಗ ಬಹಿರಂಗವಾಗಿದೆ.

ಆರೋಪಿಗಳು ಬಾಲಕನನ್ನು ಅಪಹರಿಸಿ, ಅವನ ಕುಟುಂಬದಿಂದ 1 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕೃತ್ಯದ ಹಿಂದೆ ಬಾಲಕನಿಗೆ ಪರಿಚಿತನಾಗಿದ್ದ ಅವನ ಸ್ವಂತ ಸೋದರಳಿಯ ಸಂಜಯ್ ಸಾಹು ಇದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ಹೀಗಿದೆ: ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕ ಬೆಳೆಸಿಕೊಂಡ ಮಹಿಳೆ, ಬಾಲಕನ ವಿಶ್ವಾಸ ಗಳಿಸಿ ಅವನನ್ನು ದುರ್ಗ್ ಜಿಲ್ಲೆಯ ತಿರಂಗಾ ಚೌಕ್ ಪ್ರದೇಶಕ್ಕೆ ಕರೆಯಿಸಿಕೊಂಡಿದ್ದಾಳೆ. ಆಕೆಯ ಮಾತಿಗೆ ನಂಬಿಕೆ ಇಟ್ಟು ಅಲ್ಲಿಗೆ ತೆರಳಿದ ಬಾಲಕನನ್ನು ಈಗಾಗಲೇ ತಯಾರಾಗಿ ಕಾದಿದ್ದ ತಂಡ ಅಪಹರಿಸಿದೆ. ಈ ಅಪಹರಣ ಸಂಪೂರ್ಣವಾಗಿ ಹನಿಟ್ರ್ಯಾಪ್ ತಂತ್ರದ ಮೂಲಕ ನಡೆದದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 12ರಂದು ಬಾಲಕ ಮನೆಗೆ ಮರಳದೇ ಇದ್ದಾಗ ಆತಂಕಗೊಂಡ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಅಪಹರಣಕಾರರು ಕರೆ ಮಾಡಿ, ಬಾಲಕನ ಬಿಡುಗಡೆಗಾಗಿ 1 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ. ವಿಡಿಯೋಗಳ ಮೂಲಕವೂ ಒತ್ತಡ ಹಾಕಲು ಪ್ರಯತ್ನಿಸಿದ್ದರು.

ದೂರು ದಾಖಲಿಸಿಕೊಂಡ ಬಳಿಕ ಆಮ್ಲೇಶ್ವರ ಪೊಲೀಸ್ ಠಾಣೆ, ಸೈಬರ್ ಸೆಲ್ ಮತ್ತು ACCU ತಂಡಗಳು ಸಂಯುಕ್ತ ಕಾರ್ಯಾಚರಣೆ ಕೈಗೊಂಡವು. ಮೊಬೈಲ್ ಲೊಕೇಶನ್, ಕಾಲ್ ಡೀಟೇಲ್ ರೆಕಾರ್ಡ್ (CDR) ಹಾಗೂ ಮಾಹಿತಿದಾರರ ಸಹಾಯದಿಂದ ಆರೋಪಿಗಳ ಸುಳಿವು ಪತ್ತೆಯಾಯಿತು. ಅವರು ಧಮತರಿ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಎಲ್ಲ ಆರೋಪಿಗಳನ್ನು ಬಂಧಿಸಿ ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಈ ಪ್ರಕರಣದಲ್ಲಿ ಸಂಜಯ್ ಸಾಹು, ಹೇಮ್ ಪುಷ್ಪಾ ಸಾಹು, ಶೈಲೇಂದ್ರ ಲಹಾರೆ, ಕೃಷ್ಣ ಸಾಹು ಅಲಿಯಾಸ್ ಕರಣ್ ಹಾಗೂ ರವೀಂದ್ರ ಲಹಾರೆ ಸೇರಿ ಐವರನ್ನು ಬಂಧಿಸಲಾಗಿದೆ. ಇವರಿಂದ ಒಂದು ಕಾರು ಮತ್ತು 6 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಘಟನೆ ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಎಚ್ಚರಿಕೆಯ ಅಗತ್ಯವನ್ನೂ ಮತ್ತೆ ಒತ್ತಿ ಹೇಳುತ್ತದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago