ಬೇತಮಂಗಲದ ಸಮೀಪ, ಬೆಂಗಳೂರಿನಿಂದ ಚೆನ್ನೈ ಕಾರಿಡಾರ್ ರಸ್ತೆಯ ಸುಂದರಪಾಳ್ಯ ಗ್ರಾಮದ ಟೋಲ್ ಪಾವತಿ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸ್ಥಾಪಿಸಿರುವ ನಾಮಫಲಕದಲ್ಲಿ ಬೆಂಗಳೂರಿನ ಹೆಸರನ್ನು ‘ಬಂಗಳೂರು’ ಎಂದು ತಪ್ಪಾಗಿ ನಮೂದಿಸಲಾಗಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕನ್ನಡದ ಬಗ್ಗೆ ನಿರ್ಲಕ್ಷ್ಯಕ್ಕೆ ಆಕ್ರೋಶ
ರಾಜ್ಯದ ಗಡಿಭಾಗದಲ್ಲಿ ತೆಲುಗು ಭಾಷೆಯ ಪ್ರಭಾವದಿಂದ ಕನ್ನಡ ಉಳಿಸುವ ಸವಾಲಿನ ಮಧ್ಯೆ, ಗುತ್ತಿಗೆದಾರರು ಬೆಂಗಳೂರು ಹೆಸರನ್ನು ತಪ್ಪಾಗಿ ನಮೂದಿಸಿರುವುದು ಕನ್ನಡ ಸಂಘಟನೆಗಳ ಕೋಪಕ್ಕೆ ಕಾರಣವಾಗಿದೆ.
ಸ್ಥಳೀಯರ ಆಕ್ರೋಶ
“ಸುನ್ದರಪಾಳ್ಯ ಗ್ರಾಮದ ಮೂಲಕ ಬೇತಮಂಗಲ ಮತ್ತು ಇತರ ಗ್ರಾಮಗಳಿಗೆ ಕಾರಿಡಾರ್ ರಸ್ತೆಯಿಂದ ಪ್ರವೇಶ ಸಾಧ್ಯ. ಇಂತಹ ಪ್ರಮುಖ ಸ್ಥಳದಲ್ಲಿ ನಮ್ಮ ರಾಜ್ಯದ ಹೆಮ್ಮೆಯ ನಗರಿ ಬೆಂಗಳೂರಿನ ಹೆಸರನ್ನು ತಪ್ಪಾಗಿ ಬರೆದಿದ್ದಾರೆ. ಇದು ಖಂಡನೀಯ. ಜೊತೆಗೆ ಸುಂದರಪಾಳ್ಯ ಗ್ರಾಮ ಹೆಸರನ್ನೂ ನಾಮಫಲಕದಲ್ಲಿ ಬಿಡಲಾಗಿದೆ,” ಎಂದು ಗ್ರಾಪಂ ಮಾಜಿ ಅಧ್ಯಕ್ಷ ರಾಮ್ ಬಾಬು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಭಾಷೆಯ ಪ್ರಾಮುಖ್ಯತೆಯನ್ನು ಕಾಪಾಡಲು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…