Latest

ಬೇತಮಂಗಲ ಟೋಲ್ ಪಾಯಿಂಟ್‌ ಬಳಿ ಬೆಂಗಳೂರಿನ ಹೆಸರನ್ನು ತಪ್ಪಾಗಿ ನಮೂದಿಸಿ ಕನ್ನಡಕ್ಕೆ ಅವಮಾನ

ಬೇತಮಂಗಲದ ಸಮೀಪ, ಬೆಂಗಳೂರಿನಿಂದ ಚೆನ್ನೈ ಕಾರಿಡಾರ್ ರಸ್ತೆಯ ಸುಂದರಪಾಳ್ಯ ಗ್ರಾಮದ ಟೋಲ್ ಪಾವತಿ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸ್ಥಾಪಿಸಿರುವ ನಾಮಫಲಕದಲ್ಲಿ ಬೆಂಗಳೂರಿನ ಹೆಸರನ್ನು ‘ಬಂಗಳೂರು’ ಎಂದು ತಪ್ಪಾಗಿ ನಮೂದಿಸಲಾಗಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕನ್ನಡದ ಬಗ್ಗೆ ನಿರ್ಲಕ್ಷ್ಯಕ್ಕೆ ಆಕ್ರೋಶ
ರಾಜ್ಯದ ಗಡಿಭಾಗದಲ್ಲಿ ತೆಲುಗು ಭಾಷೆಯ ಪ್ರಭಾವದಿಂದ ಕನ್ನಡ ಉಳಿಸುವ ಸವಾಲಿನ ಮಧ್ಯೆ, ಗುತ್ತಿಗೆದಾರರು ಬೆಂಗಳೂರು ಹೆಸರನ್ನು ತಪ್ಪಾಗಿ ನಮೂದಿಸಿರುವುದು ಕನ್ನಡ ಸಂಘಟನೆಗಳ ಕೋಪಕ್ಕೆ ಕಾರಣವಾಗಿದೆ.
ಸ್ಥಳೀಯರ ಆಕ್ರೋಶ
“ಸುನ್ದರಪಾಳ್ಯ ಗ್ರಾಮದ ಮೂಲಕ ಬೇತಮಂಗಲ ಮತ್ತು ಇತರ ಗ್ರಾಮಗಳಿಗೆ ಕಾರಿಡಾರ್ ರಸ್ತೆಯಿಂದ ಪ್ರವೇಶ ಸಾಧ್ಯ. ಇಂತಹ ಪ್ರಮುಖ ಸ್ಥಳದಲ್ಲಿ ನಮ್ಮ ರಾಜ್ಯದ ಹೆಮ್ಮೆಯ ನಗರಿ ಬೆಂಗಳೂರಿನ ಹೆಸರನ್ನು ತಪ್ಪಾಗಿ ಬರೆದಿದ್ದಾರೆ. ಇದು ಖಂಡನೀಯ. ಜೊತೆಗೆ ಸುಂದರಪಾಳ್ಯ ಗ್ರಾಮ ಹೆಸರನ್ನೂ ನಾಮಫಲಕದಲ್ಲಿ ಬಿಡಲಾಗಿದೆ,” ಎಂದು ಗ್ರಾಪಂ ಮಾಜಿ ಅಧ್ಯಕ್ಷ ರಾಮ್ ಬಾಬು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಭಾಷೆಯ ಪ್ರಾಮುಖ್ಯತೆಯನ್ನು ಕಾಪಾಡಲು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago