ಬೇತಮಂಗಲದ ಸಮೀಪ, ಬೆಂಗಳೂರಿನಿಂದ ಚೆನ್ನೈ ಕಾರಿಡಾರ್ ರಸ್ತೆಯ ಸುಂದರಪಾಳ್ಯ ಗ್ರಾಮದ ಟೋಲ್ ಪಾವತಿ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸ್ಥಾಪಿಸಿರುವ ನಾಮಫಲಕದಲ್ಲಿ ಬೆಂಗಳೂರಿನ ಹೆಸರನ್ನು ‘ಬಂಗಳೂರು’ ಎಂದು ತಪ್ಪಾಗಿ ನಮೂದಿಸಲಾಗಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕನ್ನಡದ ಬಗ್ಗೆ ನಿರ್ಲಕ್ಷ್ಯಕ್ಕೆ ಆಕ್ರೋಶ
ರಾಜ್ಯದ ಗಡಿಭಾಗದಲ್ಲಿ ತೆಲುಗು ಭಾಷೆಯ ಪ್ರಭಾವದಿಂದ ಕನ್ನಡ ಉಳಿಸುವ ಸವಾಲಿನ ಮಧ್ಯೆ, ಗುತ್ತಿಗೆದಾರರು ಬೆಂಗಳೂರು ಹೆಸರನ್ನು ತಪ್ಪಾಗಿ ನಮೂದಿಸಿರುವುದು ಕನ್ನಡ ಸಂಘಟನೆಗಳ ಕೋಪಕ್ಕೆ ಕಾರಣವಾಗಿದೆ.
ಸ್ಥಳೀಯರ ಆಕ್ರೋಶ
“ಸುನ್ದರಪಾಳ್ಯ ಗ್ರಾಮದ ಮೂಲಕ ಬೇತಮಂಗಲ ಮತ್ತು ಇತರ ಗ್ರಾಮಗಳಿಗೆ ಕಾರಿಡಾರ್ ರಸ್ತೆಯಿಂದ ಪ್ರವೇಶ ಸಾಧ್ಯ. ಇಂತಹ ಪ್ರಮುಖ ಸ್ಥಳದಲ್ಲಿ ನಮ್ಮ ರಾಜ್ಯದ ಹೆಮ್ಮೆಯ ನಗರಿ ಬೆಂಗಳೂರಿನ ಹೆಸರನ್ನು ತಪ್ಪಾಗಿ ಬರೆದಿದ್ದಾರೆ. ಇದು ಖಂಡನೀಯ. ಜೊತೆಗೆ ಸುಂದರಪಾಳ್ಯ ಗ್ರಾಮ ಹೆಸರನ್ನೂ ನಾಮಫಲಕದಲ್ಲಿ ಬಿಡಲಾಗಿದೆ,” ಎಂದು ಗ್ರಾಪಂ ಮಾಜಿ ಅಧ್ಯಕ್ಷ ರಾಮ್ ಬಾಬು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಭಾಷೆಯ ಪ್ರಾಮುಖ್ಯತೆಯನ್ನು ಕಾಪಾಡಲು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…