ಮುಂಡಗೋಡ: ಪಟ್ಟಣದ ಬೆಂಡಿಗೇರಿ ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಿದ್ದ ಬೈಕನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 17 ರಂದು ಮುಂಡಗೋಡದ ಬೆಂಡಿಗೇರಿ ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಿದ್ದ ಬಜಾಜ್ ಪ್ಲಾಟಿನಾ ಬೈಕನ್ನು ಯಾರೋ ಕಳ್ಳತನ ಮಾಡಿದ್ದಾರೆಂದು ಲಕ್ಕೊಳ್ಳಿ ಗ್ರಾಮದ ಕೃಷ್ಣಾ ಸಿಂಗನಳ್ಳಿ ಅವರು ದೂರು ದಾಖಲಿಸಿದ್ದರು.
ಈ ಪ್ರಕರಣವನ್ನು ಕೈಗೆತ್ತಿಕೊಂಡ ಮುಂಡಗೋಡ ಪೊಲೀಸರು ತಾಲೂಕಿನ ಬಡ್ಡಿಗೇರಿ ಗ್ರಾಮದ ವಿಠ್ಠೂ ಬೀರು ಎಡಿಗೆ ಎಂಬಾತನನ್ನು ಬಂಧಿಸಿ ಕಳ್ಳತನ ಮಾಡಿದ್ದ ಬೈಕನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣವನ್ನು ಭೇದಿಸಲು ಉತ್ತರ ಕನ್ನಡದ ಎಸ್.ಪಿ.ಸುಮನ್ ಪನ್ನೆಕರ್,ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ್,ಡಿ.ಎಸ್.ಪಿ. ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ ಸಿದ್ದಪ್ಪ ಸಿಮಾನಿ,ಪಿ.ಎಸ್.ಐ ಬಸವರಾಜ್ ಮಬನೂರ,ಪಿ.ಎಸ್.ಐ ನಿಂಗಪ್ಪ ಜಕ್ಕಣ್ಣವರ,ಪ್ರೊಬೇಷನರಿ ಪಿ.ಎಸ್.ಐ ಮಹೇಶ ಮಾಳಿ,ಸಿಬ್ಬಂದಿಗಳಾದ ಮಹ್ಮದ ಸಲಿಂ,ಕೊಟೇಶ್ ನಾಗರವಳ್ಳಿ ಅಣ್ಣಪ್ಪ ಬಡಿಗೇರ,ಬಸವರಾಜ ಲಮಾಣಿ, ಶಂಭುಲಿಂಗ ಜಾವೂರ,ಅರುಣ ಬಾಗೇವಾಡಿ,ಎ ಎಚ್ ಸಿ ನಾಗರಾಜ ಬೇಗಾರ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರುಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರ ರವರು ಪ್ರಶಂಸಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ
ವರದಿ: ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…