ಮುಂಡಗೋಡ: ಬೈಕ್ ಕಳ್ಳತನ ಮಾಡಿ ಪರಾರಿಯಾಗಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಮುಂಡಗೋಡ ಪೊಲೀಸರು ಬೈಕ್ ಸಮೇತ ಬಂಧಿಸಿದ್ದಾರೆ.ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪ ಗ್ರಾಮದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಜೂನ್ 6 ರಂದು ತಾಲೂಕಿನ ಕಾತುರ ಗ್ರಾಮದ ಸಿರಾಜ್ ಭಾಷಾ ಬೊಮ್ಮನಹಳ್ಳಿ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ರೊ ಬೈಕ್ ಕಳ್ಳತನವಾಗಿತ್ತು.ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣವನ್ನು ಕೈಗೆತ್ತಿಕೊಂಡ ಮುಂಡಗೋಡ ಪೊಲೀಸರು ಬೈಕ್ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂದಿತರು ಪಿಯು ಮಹಾರಾಷ್ಟ್ರದ ಪುಣೆ, ಸೊಲ್ಹಾಪುರ ಹಾಗೂ ಕೊಲ್ಹಾಪುರ ಸೇರಿದಂತೆ ಹತ್ತಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಮುಂಡಗೋಡ ಪೊಲೀಸ್ ಠಾಣೆಯ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ.ಎಸ್.ಐ ಬಸವರಾಜ್ ಮಬನೂರ, ಕ್ರೈಂ ಪಿ.ಎಸ್.ಐ ಎನ್. ಡಿ ಜಕ್ಕಣ್ಣವರ್, ಎ.ಎಸ್.ಐ ಮಣಿಮಾಲನ್ ಮೇಸ್ತ್ರಿ, ಲೋಕೇಶ್ ಮೇಸ್ತ್, ಹಾಗೂ ಸಿಬ್ಬಂದಿಗಳಾದ ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ ವಿವೇಕ ಪಟಗಾರ, ಸಲೀಂ,ಸಹದೇವ, ಶರತ್ ದೇವಳಿ ಸೇರಿದಂತೆ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹರಿಜನ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…