ಮುಂಡಗೋಡ: ಬೈಕ್ ಕಳ್ಳತನ ಮಾಡಿ ಪರಾರಿಯಾಗಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಮುಂಡಗೋಡ ಪೊಲೀಸರು ಬೈಕ್ ಸಮೇತ ಬಂಧಿಸಿದ್ದಾರೆ.ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪ ಗ್ರಾಮದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಜೂನ್ 6 ರಂದು ತಾಲೂಕಿನ ಕಾತುರ ಗ್ರಾಮದ ಸಿರಾಜ್ ಭಾಷಾ ಬೊಮ್ಮನಹಳ್ಳಿ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ರೊ ಬೈಕ್ ಕಳ್ಳತನವಾಗಿತ್ತು.ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣವನ್ನು ಕೈಗೆತ್ತಿಕೊಂಡ ಮುಂಡಗೋಡ ಪೊಲೀಸರು ಬೈಕ್ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂದಿತರು ಪಿಯು ಮಹಾರಾಷ್ಟ್ರದ ಪುಣೆ, ಸೊಲ್ಹಾಪುರ ಹಾಗೂ ಕೊಲ್ಹಾಪುರ ಸೇರಿದಂತೆ ಹತ್ತಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಮುಂಡಗೋಡ ಪೊಲೀಸ್ ಠಾಣೆಯ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ.ಎಸ್.ಐ ಬಸವರಾಜ್ ಮಬನೂರ, ಕ್ರೈಂ ಪಿ.ಎಸ್.ಐ ಎನ್. ಡಿ ಜಕ್ಕಣ್ಣವರ್, ಎ.ಎಸ್.ಐ ಮಣಿಮಾಲನ್ ಮೇಸ್ತ್ರಿ, ಲೋಕೇಶ್ ಮೇಸ್ತ್, ಹಾಗೂ ಸಿಬ್ಬಂದಿಗಳಾದ ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ ವಿವೇಕ ಪಟಗಾರ, ಸಲೀಂ,ಸಹದೇವ, ಶರತ್ ದೇವಳಿ ಸೇರಿದಂತೆ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…