ಮುಂಡಗೋಡ: ಬೈಕ್ ಕಳ್ಳತನ ಮಾಡಿ ಪರಾರಿಯಾಗಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಮುಂಡಗೋಡ ಪೊಲೀಸರು ಬೈಕ್ ಸಮೇತ ಬಂಧಿಸಿದ್ದಾರೆ.ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪ ಗ್ರಾಮದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಜೂನ್ 6 ರಂದು ತಾಲೂಕಿನ ಕಾತುರ ಗ್ರಾಮದ ಸಿರಾಜ್ ಭಾಷಾ ಬೊಮ್ಮನಹಳ್ಳಿ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ರೊ ಬೈಕ್ ಕಳ್ಳತನವಾಗಿತ್ತು.ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣವನ್ನು ಕೈಗೆತ್ತಿಕೊಂಡ ಮುಂಡಗೋಡ ಪೊಲೀಸರು ಬೈಕ್ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂದಿತರು ಪಿಯು ಮಹಾರಾಷ್ಟ್ರದ ಪುಣೆ, ಸೊಲ್ಹಾಪುರ ಹಾಗೂ ಕೊಲ್ಹಾಪುರ ಸೇರಿದಂತೆ ಹತ್ತಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಮುಂಡಗೋಡ ಪೊಲೀಸ್ ಠಾಣೆಯ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ.ಎಸ್.ಐ ಬಸವರಾಜ್ ಮಬನೂರ, ಕ್ರೈಂ ಪಿ.ಎಸ್.ಐ ಎನ್. ಡಿ ಜಕ್ಕಣ್ಣವರ್, ಎ.ಎಸ್.ಐ ಮಣಿಮಾಲನ್ ಮೇಸ್ತ್ರಿ, ಲೋಕೇಶ್ ಮೇಸ್ತ್, ಹಾಗೂ ಸಿಬ್ಬಂದಿಗಳಾದ ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ ವಿವೇಕ ಪಟಗಾರ, ಸಲೀಂ,ಸಹದೇವ, ಶರತ್ ದೇವಳಿ ಸೇರಿದಂತೆ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹರಿಜನ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…