Latest

ಮುಂಡಗೋಡ ಪೋಲಿಸರಿಂದ ಭರ್ಜರಿ ಬೇಟೆ: ಅಂತರ್ಜಿಲ್ಲಾ ಕಳ್ಳನ ಬಂಧನ!

ಮುಂಡಗೋಡ: ಬೈಕ್ ಕಳ್ಳತನ ಮಾಡಿ ಪರಾರಿಯಾಗಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಮುಂಡಗೋಡ ಪೊಲೀಸರು ಬೈಕ್ ಸಮೇತ ಬಂಧಿಸಿದ್ದಾರೆ.ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪ ಗ್ರಾಮದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಜೂನ್ 6 ರಂದು ತಾಲೂಕಿನ ಕಾತುರ ಗ್ರಾಮದ ಸಿರಾಜ್ ಭಾಷಾ ಬೊಮ್ಮನಹಳ್ಳಿ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ರೊ ಬೈಕ್ ಕಳ್ಳತನವಾಗಿತ್ತು.ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣವನ್ನು ಕೈಗೆತ್ತಿಕೊಂಡ ಮುಂಡಗೋಡ ಪೊಲೀಸರು ಬೈಕ್ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂದಿತರು ಪಿಯು ಮಹಾರಾಷ್ಟ್ರದ ಪುಣೆ, ಸೊಲ್ಹಾಪುರ ಹಾಗೂ ಕೊಲ್ಹಾಪುರ ಸೇರಿದಂತೆ ಹತ್ತಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಮುಂಡಗೋಡ ಪೊಲೀಸ್ ಠಾಣೆಯ ಸಿ.ಪಿ‌.ಐ ಸಿದ್ದಪ್ಪ ಸಿಮಾನಿ, ಪಿ.ಎಸ್.ಐ ಬಸವರಾಜ್ ಮಬನೂರ, ಕ್ರೈಂ ಪಿ.ಎಸ್.ಐ ಎನ್. ಡಿ ಜಕ್ಕಣ್ಣವರ್, ಎ.ಎಸ್.ಐ ಮಣಿಮಾಲನ್ ಮೇಸ್ತ್ರಿ, ಲೋಕೇಶ್ ಮೇಸ್ತ್, ಹಾಗೂ ಸಿಬ್ಬಂದಿಗಳಾದ ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ ವಿವೇಕ ಪಟಗಾರ, ಸಲೀಂ,ಸಹದೇವ, ಶರತ್ ದೇವಳಿ ಸೇರಿದಂತೆ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

1 hour ago

ಕೊಡಗು ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಸಾವು: ‘ಹನಿಟ್ರ್ಯಾಪ್‌, ಸುಳ್ಳು ಪ್ರಕರಣ’ ಆರೋಪಗಳಿಂದ ಪ್ರಕರಣಕ್ಕೆ ಹೊಸ ತಿರುವು

ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…

1 hour ago

ಶಿವಾಜಿನಗರ ಬೌರಿಂಗ್ ಆಸ್ಪತ್ರೆ ದುರಂತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…

2 hours ago

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

17 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

17 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

19 hours ago