ಮಹಾರಾಷ್ಟ್ರದ ಕಲ್ಯಾಣ್ ವೆಸ್ಟ್ನ ಗೌರಿಪಾಡಾ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಮದ್ಯದ ಅಮಲಿನಲ್ಲಿದ್ದ ಯುವಕನೊಬ್ಬ ಮರದ ಕೋಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಸಾರ್ವಜನಿಕರ ನಡುವಿನ ಗಲಾಟೆ ಕುರಿತು ಮಾಹಿತಿ ಪಡೆದ ಕಾನ್ಸ್ಟೇಬಲ್ ಗಣೇಶ್ ಚವಾಣ್ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದರು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ರಾಹುಲ್ ತಾಯಡೆ ಎಂಬಾತ ಏಕಾಏಕಿ ಮರದ ಕೋಲಿನಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಪೂರ್ಣ ಘಟನೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಗಾಯಗೊಂಡ ಕಾನ್ಸ್ಟೇಬಲ್ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಖಡಕ್ಪಾಡಾ ಪೊಲೀಸರು ಆರೋಪಿ ರಾಹುಲ್ ತಾಯಡೆಯನ್ನು ಬಂಧಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ನೆಲಮಂಗಲ: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಗೆ ಕಾರಣವಾಗುವ ರೀತಿಯ ಹೇಳಿಕೆಗಳನ್ನು ನೀಡಿದ ಆರೋಪದಡಿ ಖಾಸಗಿ…
ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ತಾಯಿ-ಮಗನ ಪವಿತ್ರ ಬಾಂಧವ್ಯಕ್ಕೆ ಕಳಂಕ ತರುವಂತಹ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಸವತಿ ಮಗನೊಂದಿಗೆ ಅನೈತಿಕ…
ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, MLC ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ₹1.50…
ಬಿಹಾರ: ಮದುವೆಯಾಗುವ ಭರವಸೆ ನೀಡಿ ಬಳಿಕ ನಿರಾಕರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವು ಭೀಕರ ಸ್ವರೂಪ ಪಡೆದುಕೊಂಡಿದ್ದು, ಮಹಿಳೆಯೊಬ್ಬರನ್ನು ಬೈಕ್ನಲ್ಲಿ…
ಒಡಿಶಾ: ನಾಲ್ಕು ವರ್ಷಗಳ ಹಿಂದೆ ನಡೆದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸೌಮ್ಯರಂಜನ್ ಮೊಹಾಪಾತ್ರ ಅವರ ಅನುಮಾನಾಸ್ಪದ ಸಾವು ಪ್ರಕರಣ…
ಚಿಕ್ಕಬಳ್ಳಾಪುರದಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಜನಿಸಿದ ಕೇವಲ ಎರಡು ದಿನಗಳ ಗಂಡು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ತಾಯಿ ನಾಪತ್ತೆಯಾಗಿರುವ…