ಕೊಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಆನ್ಲೈನ್ ಆ್ಯಪ್ಗಳ ಸಹಾಯದಿಂದ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ. ಸಿಇಎನ್ ಪೊಲೀಸರ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ನಯಾಜ್ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಎರಡು ಮೊಬೈಲ್ ಫೋನ್ಗಳು ಮತ್ತು ಖಾತೆಯಲ್ಲಿ ಇರುವ ₹5.19 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ನಗದು ಹಾಗೂ ಯುಪಿಐ ಮೂಲಕ ಹಣ ಸ್ವೀಕರಿಸಿ, ಆನ್ಲೈನ್ನಲ್ಲಿ ಬೆಟ್ಟಿಂಗ್ ಚಟುವಟಿಕೆ ನಡೆಸುತ್ತಿದ್ದಾನೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರಬಹುದೆಂಬ ಶಂಕೆಯಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಈ ದಾಳಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಎಸ್ಪಿ ಸಿ.ಆರ್. ರವಿಶಂಕರ್, ಎಚ್.ಸಿ. ಜಗದೀಶ್, ಸಿಇಎನ್ ವಿಭಾಗದ ಅಧಿಕಾರಿಗಳಾದ ರಾಜೇಶ್, ಎಸ್.ಆರ್. ಜಗದೀಶ್, ವಿನಯ್, ಶಿವಾನಂದ, ಅರುಣ್ ಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.
ಪೋಲೀಸರು ಇದೀಗ ಬೆಟ್ಟಿಂಗ್ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…