Latest

ಐಪಿಎಲ್ ಟಿಕೆಟ್ ಕಳ್ಳ ವಹಿವಾಟು – ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಅಮಾನತು

ಬೆಂಗಳೂರು ನಗರದಲ್ಲಿ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳ ಅಕ್ರಮ ಮಾರಾಟ ಪ್ರಕರಣಕ್ಕೆ ತೊಡಗಿರುವ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್ ಅವರು ಆದೇಶ ಹೊರಡಿಸಿದ್ದಾರೆ.

ಹಲಸೂರು ಸಂಚಾರಿ ಠಾಣೆಗೆ ಸೇರಿದ್ದ ಕಾನ್ಸ್ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿಯಾಗಿದ್ದ ವೆಂಕಟಗಿರಿಗೌಡ ಎಂಬವರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಟಿಕೆಟ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದರೆಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.

ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಸುಮಾರು ₹20,000 ನಗದು ಹಾಗೂ 61 ಐಪಿಎಲ್ ಟಿಕೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ 17ರಂದು ನಡೆದ ಆರ್ಸಿಬಿ ಮತ್ತು ಕೆಕೆಆರ್ ನಡುವೆ ನಡೆದ ಹೈವೋಲ್ಟೇಜ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳೇ ಇವು. ವಿಜಯನಗರದ ಪಾರ್ಕ್ ಬಳಿ ಈ ಟಿಕೆಟ್‌ಗಳ ಮಾರಾಟ ನಡೆಯುತ್ತಿದ್ದಾಗ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಬಂಧನಕ್ಕೆ ಒಳಗಾದರು.

ಈ ಪ್ರಕರಣದಲ್ಲಿ ಶಂಕರ್ ಮತ್ತು ಸುರೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಆದರೆ ಕಾನ್ಸ್ಟೇಬಲ್ ರವಿಚಂದ್ರ ಮತ್ತು ವೆಂಕಟಗಿರಿಗೌಡಗೆ ಮಾತ್ರ ನೋಟಿಸ್ ನೀಡಿ ಬಿಡಲಾಗಿತ್ತು. ಇದೀಗ, ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಅವರ ಮೇಲೆ ಇಲಾಖಾ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಆರೋಪಿಗಳು ಈಗಾಗಲೇ ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಘಟನೆಯು ಪೊಲೀಸರಿಗೆಲ್ಲಾ ಲಾಂಛನ ಉಂಟುಮಾಡಿರುವುದು ಮಾತ್ರವಲ್ಲದೆ, ಸಾರ್ವಜನಿಕರಲ್ಲಿ ನಿರೀಕ್ಷಿತ ನೈತಿಕತೆ ಹಾಗೂ ಜವಾಬ್ದಾರಿಯತ್ತ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

12 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago