Latest

ಮಹಿಳಾ ASI ಜೊತೆ IPS ಅಧಿಕಾರಿ ಅಕ್ರಮ ಸಂಬಂಧ ಆರೋಪ; ನೊಂದ ಪೊಲೀಸ್ ಹೋರಾಟ

ಕಲಬುರಗಿ: IPS ಅಧಿಕಾರಿ ಅರುಣ್ ರಂಗರಾಜನ್​ ಅವರು ಮಹಿಳಾ ASI ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ನನ್ನ ಹೆಂಡತಿ ಜೊತೆ IPS ಅಧಿಕಾರಿ ಅರುಣ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆಕೆಯ ಗಂಡ ಜಿಲ್ಲೆಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಗರದ ಐವಾನ್ ಶಾಹಿ ಬಡವಾಣೆಯಲ್ಲಿನ PWD ಕ್ವಾಟರ್ಸ್‌ನಲ್ಲಿ ಇಬ್ಬರು ಒಟ್ಟಿಗೆ ಇದ್ದರು. ಇದನ್ನು ಕಂಡ ಗಂಡನಿಗೆ ಶಾಕ್​ ಆಗಿತ್ತು. ಬಳಿಕ ಇಬ್ಬರು ಇರುವುದನ್ನು ವಿಡಿಯೋ ಮಾಡಿದ್ದರು. ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ಪತಿಯನ್ನ ಹತ್ಯೆ ಮಾಡುವುದಾಗಿ ಪತ್ನಿ ಮತ್ತು ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್​ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಏಕಾಂತದಲ್ಲಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು ಜಿಲ್ಲೆಯ ISD ವಿಭಾಗದಲ್ಲಿ ಕಳೆದ 3 ವರ್ಷಗಳಿಂದ ಈ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್​ಐ ಜೊತೆ ಐಪಿಎಸ್​ ಅರುಣ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿಂದೆಯು ಇಬ್ಬರು ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿ ಹಾಕಿಕೊಂಡಿದ್ದರು. ಹೀಗಾಗಿ ಎರಡ್ಮೂರು ಬಾರಿ ಪತ್ನಿಗೆ ಹಾಗೂ ಐಪಿಎಸ್ ಅಧಿಕಾರಿಗೆ ಪತಿ ತಿಳಿ ಹೇಳಿದ್ದರು. ಐಪಿಎಸ್​ ಅರುಣ್​ ಮನೆಯಲ್ಲೂ ಒಮ್ಮೆ ಪತಿ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಹಾಕಿಕೊಡಿದ್ದರು. ಈ ವೇಳೆ ಮನೆಯೊಳಗೆ ಹೋಗಲು ಪ್ರಯತ್ನಿಸಿದ್ದ ಪತಿಗೆ ಕೊಲೆ ಮಾಡುವುದಾಗಿ ಇಬ್ಬರು ಬೆದರಿಕೆ ಹಾಕಿದ್ದರು. ಹೀಗಾಗಿ ಮನೆ ಸುತ್ತಾ ಓಡಾಡಿ ಪತಿ ವಿಡಿಯೋ ಮಾಡಿದ್ದರು. ಸದ್ಯ ತನ್ನ ಪತ್ನಿ ಹಾಗೂ ಐಪಿಎಸ್ ಅರುಣ್ ರಂಗರಾಜನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 323 , 324 , 498 , 376(2) (b) , 342, 504, 506 (2) 507, 420, 406, 500, 201, 109, 457 ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಐಪಿಎಸ್​ ಅರುಣ್ ರಂಗರಾಜನ್ ಹೇಳೋದೇನು..? ಮಹಿಳಾ ಎಎಸ್​ಐ ಅಧಿಕಾರಿಯೊಂದಿಗೆ ಅನೈತಿಕ ಸಂಬಂಧ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅರುಣ್​ ರಂಗರಾಜನ್​ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರ ಹೆಂಡತಿಯನ್ನ ಯಾರು ಕೂಡಿ ಹಾಕೋಕೆ ಆಗಲ್ಲ. ತನ್ನ ಪತ್ನಿಯನ್ನ ಮನೆಯಲ್ಲಿಟ್ಟುಕೊಳ್ಳುವುದು ಒಬ್ಬ ಪತಿಯ ಜವಾಬ್ದಾರಿ. ಅದನ್ನ ಅವನು ಇಟ್ಟುಕೊಳ್ಳಲಿಲ್ಲ ಅಂದ್ರೆ ಅವಳು ಎಲ್ಲಿ ಬೇಕೊ ಅಲ್ಲಿ ಹೋಗಿ ಸೇರುತ್ತಾಳೆ. ನನ್ನ ಮನೆಯಲ್ಲಿ 100 ಜನ ಇರುತ್ತಾರೆ ಅದನ್ನೆಲ್ಲ ಹೇಳೊಕೆ ಆಗುತ್ತಾ? ಮನೆ ಬಾಡಿಗೆ ಕಟ್ಟುವವನು ನಾನು. ಯಾರು ಬೇಕಾದ್ರು ಇರುತ್ತಾರೆ. ಅವನ ಪತ್ನಿ ಅವನ ಮನೆಯಲ್ಲಿಲ್ಲ ಅಂದ್ರೆ ಅವನು ಎಲ್ಲಿ ಹೋಗಿ ಹುಡುಕಬೇಕು ಅಲ್ಲಿ ಹುಡುಕಬೇಕು ಎಂದು ಅರುಣ್ ರಂಗರಾಜನ್ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago