Latest

ಮಹಿಳಾ ASI ಜೊತೆ IPS ಅಧಿಕಾರಿ ಅಕ್ರಮ ಸಂಬಂಧ ಆರೋಪ; ನೊಂದ ಪೊಲೀಸ್ ಹೋರಾಟ

ಕಲಬುರಗಿ: IPS ಅಧಿಕಾರಿ ಅರುಣ್ ರಂಗರಾಜನ್​ ಅವರು ಮಹಿಳಾ ASI ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ನನ್ನ ಹೆಂಡತಿ ಜೊತೆ IPS ಅಧಿಕಾರಿ ಅರುಣ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆಕೆಯ ಗಂಡ ಜಿಲ್ಲೆಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಗರದ ಐವಾನ್ ಶಾಹಿ ಬಡವಾಣೆಯಲ್ಲಿನ PWD ಕ್ವಾಟರ್ಸ್‌ನಲ್ಲಿ ಇಬ್ಬರು ಒಟ್ಟಿಗೆ ಇದ್ದರು. ಇದನ್ನು ಕಂಡ ಗಂಡನಿಗೆ ಶಾಕ್​ ಆಗಿತ್ತು. ಬಳಿಕ ಇಬ್ಬರು ಇರುವುದನ್ನು ವಿಡಿಯೋ ಮಾಡಿದ್ದರು. ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ಪತಿಯನ್ನ ಹತ್ಯೆ ಮಾಡುವುದಾಗಿ ಪತ್ನಿ ಮತ್ತು ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್​ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಏಕಾಂತದಲ್ಲಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು ಜಿಲ್ಲೆಯ ISD ವಿಭಾಗದಲ್ಲಿ ಕಳೆದ 3 ವರ್ಷಗಳಿಂದ ಈ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್​ಐ ಜೊತೆ ಐಪಿಎಸ್​ ಅರುಣ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿಂದೆಯು ಇಬ್ಬರು ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿ ಹಾಕಿಕೊಂಡಿದ್ದರು. ಹೀಗಾಗಿ ಎರಡ್ಮೂರು ಬಾರಿ ಪತ್ನಿಗೆ ಹಾಗೂ ಐಪಿಎಸ್ ಅಧಿಕಾರಿಗೆ ಪತಿ ತಿಳಿ ಹೇಳಿದ್ದರು. ಐಪಿಎಸ್​ ಅರುಣ್​ ಮನೆಯಲ್ಲೂ ಒಮ್ಮೆ ಪತಿ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಹಾಕಿಕೊಡಿದ್ದರು. ಈ ವೇಳೆ ಮನೆಯೊಳಗೆ ಹೋಗಲು ಪ್ರಯತ್ನಿಸಿದ್ದ ಪತಿಗೆ ಕೊಲೆ ಮಾಡುವುದಾಗಿ ಇಬ್ಬರು ಬೆದರಿಕೆ ಹಾಕಿದ್ದರು. ಹೀಗಾಗಿ ಮನೆ ಸುತ್ತಾ ಓಡಾಡಿ ಪತಿ ವಿಡಿಯೋ ಮಾಡಿದ್ದರು. ಸದ್ಯ ತನ್ನ ಪತ್ನಿ ಹಾಗೂ ಐಪಿಎಸ್ ಅರುಣ್ ರಂಗರಾಜನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 323 , 324 , 498 , 376(2) (b) , 342, 504, 506 (2) 507, 420, 406, 500, 201, 109, 457 ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಐಪಿಎಸ್​ ಅರುಣ್ ರಂಗರಾಜನ್ ಹೇಳೋದೇನು..? ಮಹಿಳಾ ಎಎಸ್​ಐ ಅಧಿಕಾರಿಯೊಂದಿಗೆ ಅನೈತಿಕ ಸಂಬಂಧ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅರುಣ್​ ರಂಗರಾಜನ್​ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರ ಹೆಂಡತಿಯನ್ನ ಯಾರು ಕೂಡಿ ಹಾಕೋಕೆ ಆಗಲ್ಲ. ತನ್ನ ಪತ್ನಿಯನ್ನ ಮನೆಯಲ್ಲಿಟ್ಟುಕೊಳ್ಳುವುದು ಒಬ್ಬ ಪತಿಯ ಜವಾಬ್ದಾರಿ. ಅದನ್ನ ಅವನು ಇಟ್ಟುಕೊಳ್ಳಲಿಲ್ಲ ಅಂದ್ರೆ ಅವಳು ಎಲ್ಲಿ ಬೇಕೊ ಅಲ್ಲಿ ಹೋಗಿ ಸೇರುತ್ತಾಳೆ. ನನ್ನ ಮನೆಯಲ್ಲಿ 100 ಜನ ಇರುತ್ತಾರೆ ಅದನ್ನೆಲ್ಲ ಹೇಳೊಕೆ ಆಗುತ್ತಾ? ಮನೆ ಬಾಡಿಗೆ ಕಟ್ಟುವವನು ನಾನು. ಯಾರು ಬೇಕಾದ್ರು ಇರುತ್ತಾರೆ. ಅವನ ಪತ್ನಿ ಅವನ ಮನೆಯಲ್ಲಿಲ್ಲ ಅಂದ್ರೆ ಅವನು ಎಲ್ಲಿ ಹೋಗಿ ಹುಡುಕಬೇಕು ಅಲ್ಲಿ ಹುಡುಕಬೇಕು ಎಂದು ಅರುಣ್ ರಂಗರಾಜನ್ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

1 hour ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

1 hour ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

1 hour ago

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

14 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

16 hours ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

16 hours ago