ಮಹಿಳೆಯರ ಮೇಲಿನ ಕಿರುಕುಳ ಮತ್ತು ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ, ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿ ಪುಂಡರ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಕೈಗೊಂಡ ದಿಟ್ಟ ಕ್ರಮ ಇದೀಗ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಹೈದರಾಬಾದ್ನ ದಿಲ್ ಸುಖ್ ನಗರದ ಜನನಿಬಿಡ ಬಸ್ ನಿಲ್ದಾಣದಲ್ಲಿ ಮಲ್ಕಾಜ್ ಗಿರಿ ಪೊಲೀಸ್ ಕಮಿಷನರ್ ಬಿ. ಸುಮತಿ ಅಂಡರ್ಕವರ್ ಕಾರ್ಯಾಚರಣೆ ನಡೆಸಿದ್ದಾರೆ. ಮಧ್ಯರಾತ್ರಿ ಸುಮಾರು 2:30ರ ವೇಳೆಗೆ ಸಾಮಾನ್ಯ ಮಹಿಳೆಯಂತೆ ವೇಷಧರಿಸಿ ಬಸ್ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ನಿಂತು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಒಂಟಿಯಾಗಿ ನಿಂತಿದ್ದ ಮಹಿಳೆಯನ್ನು ಕಂಡ ಕೆಲ ಬೀದಿ ಕಾಮಣ್ಣರು ಹಾಗೂ ಪುಂಡ ಯುವಕರು ಬೈಕ್ಗಳಲ್ಲಿ ಸ್ಥಳಕ್ಕಾಗಮಿಸಿ ಕಿರುಕುಳ ನೀಡಲು ಮುಂದಾಗಿದ್ದಾರೆ. ಮಹಿಳೆ ಪೊಲೀಸ್ ಅಧಿಕಾರಿ ಎಂಬ ಅರಿವಿಲ್ಲದೇ ಅಸಭ್ಯವಾಗಿ ಮಾತನಾಡುವುದು, ಕೆಟ್ಟ ಪ್ರಶ್ನೆಗಳನ್ನು ಕೇಳುವುದು ಸೇರಿದಂತೆ ತಮ್ಮ ಪುಂಡಾಟ ಮುಂದುವರಿಸಿದ್ದಾರೆ.
ಆದರೆ ಇದರಿಂದ ವಿಚಲಿತರಾಗದ ಕಮಿಷನರ್ ಸುಮತಿ, ಮಾರುವೇಷದಲ್ಲಿದ್ದ ಎಸ್ಐ, ಇನ್ಸ್ಪೆಕ್ಟರ್ ಹಾಗೂ ಇತರ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು ಪುಂಡರನ್ನು ಸುತ್ತುವರಿದು ವಶಕ್ಕೆ ಪಡೆದಿದ್ದಾರೆ.
ಈ ದಿಢೀರ್ ಕಾರ್ಯಾಚರಣೆಯಲ್ಲಿ ಸುಮಾರು 40 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ದಿಲ್ ಸುಖ್ ನಗರದಲ್ಲಿನ ಹಾಸ್ಟೆಲ್ ಪ್ರದೇಶಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳು ಹೆಚ್ಚಾಗಿದ್ದ ಹಿನ್ನೆಲೆ, ಕಮಿಷನರ್ ಸುಮತಿ ಸ್ವತಃ ಮೈದಾನಕ್ಕಿಳಿದು ಕಾರ್ಯಾಚರಣೆ ನಡೆಸಿದ್ದಾರೆ. ಮಹಿಳಾ ಸುರಕ್ಷತೆ ವಿಚಾರದಲ್ಲಿ ಪೊಲೀಸರ ಈ ದಿಟ್ಟ ಹೆಜ್ಜೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…