Latest

ಐಪಿಎಸ್ ಅಧಿಕಾರಿಯಿಂದ ಅಪ್ರಾಪ್ತ ಬಾಲಕಿಯ ವಿವಾಹ: ವಯಸ್ಸು ತಿದ್ದುಪಡಿ ಮಾಡಿಸಿದ ಆರೋಪ

ಬೆಳಗಾವಿಯಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯ ವಿವಾಹಕ್ಕೆ ಸ್ವತಃ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರೇ ಕೈಜೋಡಿಸಿರುವ ಮಾಹಿತಿಯಾಗಿದೆ. ಬೆಳಗಾವಿ ವಿಭಾಗದ ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ರವೀಂದ್ರ ಗಡಾಡಿ ಅವರು, ತಮ್ಮ ಸಂಬಂಧಿಯೊಂದಿಗೆ ಬಾಲಕಿಯನ್ನು ವಿವಾಹ ಮಾಡಿಸಿದ್ದಾಗಿ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

ಅಪ್ರಾಪ್ತೆಯ ವಯಸ್ಸು ತಿದ್ದುಪಡಿ ಮಾಡಿಸಿ ವಿವಾಹ

ಬಾಲಕಿಯ ಮೂಲ ಜನ್ಮ ದಿನಾಂಕ ಜೂನ್ 1, 2008 ಆಗಿದ್ದರೂ, ಅಧಿಕಾರಿ ಆಧಾರ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿಸಿ ಅದನ್ನು ಜೂನ್ 1, 2002 ಆಗಿ ಬದಲಾಯಿಸಿ, 2022ರಲ್ಲಿ ಮದುವೆ ಮಾಡಿಸಿದ್ದಾಗಿ ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿವಾಹ ಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿರುವ ಖಾಸಗಿ ಫಾರ್ಮ್‌ಹೌಸ್‌ನಲ್ಲಿ ನಡೆದಿತ್ತು.

ಮಗುವಿಗೆ ಜನ್ಮ ನೀಡಿದ ಬಾಲಕಿ

ಮೂರು ತಿಂಗಳ ಹಿಂದಷ್ಟೇ ಈ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಮೂಲಕ ಓದುವ ವಯಸ್ಸಿನಲ್ಲಿ ಇತರರ ಪ್ರಭಾವದಿಂದ ಬಾಳಿಗೇ ಬಲಿಯಾಗಬೇಕಾದ ಸ್ಥಿತಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಬಹುದಾದ ಸಾಧ್ಯತೆ ಇದ್ದು, ಐಪಿಎಸ್ ಅಧಿಕಾರಿಯ ಭಾಗವಹಿಸುವಿಕೆ ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳುವಂತೆ ಹಕ್ಕು ಸಮಿತಿ ಮತ್ತು ಮಹಿಳಾ ಹಕ್ಕು ಸಂಘಟನೆಗಳು ಒತ್ತಾಯಿಸುತ್ತಿವೆ.

ಈ ಸಂಬಂಧ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದ್ದು, ಹೆಚ್ಚಿನ ಮಾಹಿತಿ ಹೊರಬಿದ್ದರೆ ಹೆಚ್ಚಿನ ಕಾನೂನು ಕ್ರಮ ಮತ್ತು ತನಿಖೆ ಆರಂಭವಾಗುವ ಸಾಧ್ಯತೆ ಇದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

17 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

17 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

17 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

17 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

17 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

17 hours ago