ಬಂಟ್ವಾಳ ತಾಲ್ಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹೀಮ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ ಪೊಲೀಸರು ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಪುದು ಗ್ರಾಮದ ನಿವಾಸಿ ಪ್ರದೀಪ್ (34) ಎಂಬವರನ್ನು ಶನಿವಾರ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಈ ಮೊದಲು ಈ ಪ್ರಕರಣದಲ್ಲಿ ಪೊಲೀಸರು ಮುಂಡರಕೋಡಿ ಗ್ರಾಮದ ದೀಪಕ್, ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿಗಳಾದ ಪೃಥ್ವಿರಾಜ್ ಮತ್ತು ಚಿಂತನ್, ತೆಂಕಬೆಳ್ಳೂರು ನಿವಾಸಿ ಸುಮಿತ್ ಆಚಾರ್ಯ, ಬಡಗಬೆಳ್ಳೂರು ನಿವಾಸಿಗಳಾದ ರವಿರಾಜ್ ಮತ್ತು ತೇಜಾಕ್ಷ, ತೆಂಕಬೆಳ್ಳೂರು ನಿವಾಸಿ ಅಭಿನ್ ರೈ, ಶೃಂಗೇರಿ ಬೆಟ್ಟಗೆರೆ ಗ್ರಾಮದ ರವಿ ಸಂಜಯ್ ಮತ್ತು ತುಂಬೆ ಗ್ರಾಮದ ಶಿವಪ್ರಸಾದ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಪೊಲೀಸರಿಗೆ ನಿಗದಿತ ಅವಧಿಗೆ ಅವರ ಕಸ್ಟಡಿ ದೊರೆತು, ವಿಚಾರಣೆ ಮುಂದುವರೆದಿದೆ.
ತನಿಖೆಯ ವೇಳೆ ಆರೋಪಿಗಳ ಜೊತೆಗಿನ ಸಂಪರ್ಕ ಮತ್ತು ಘಟನೆಯ ಹಿಂದಿನ ಕಾರಣಗಳ ಬಗ್ಗೆ ಮಾಹಿತಿಯನ್ನೆಲ್ಲಾ ಪೊಲೀಸರು ರಹಸ್ಯವಾಗಿ ಹಾಸುಹೊಕ್ಕುಮಾಡುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಪ್ರಮುಖ ಆರೋಪಿ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದು, ಜುಲೈ 4ರಂದು ಪೊಲೀಸರು ನ್ಯಾಯಾಲಯದಿಂದ ಶೋಧ ವಾರೆಂಟ್ ಪಡೆದು ಅವನ ಮನೆಯಲ್ಲಿ ತಪಾಸಣೆ ನಡೆಸಿದ್ದರು. ಆದರೆ ಭರತ್ ಇನ್ನು ಸಿಕ್ಕಿಲ್ಲ.
ಈ ಹತ್ಯೆ ಮತ್ತು ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಶೀಘ್ರದಲ್ಲೇ ಉಳಿದ ಆರೋಪಿಗಳೂ ಪೊಲೀಸರ ಅಜಾಗರೂಕತೆಯಿಂದ ತಪ್ಪಿಸಿಕೊಳ್ಳದಂತೆ ಕಠಿಣ ಕ್ರಮ ಕೈಗೊಳ್ಳುತ್ತಿರುವಂತೆ ತಿಳಿದುಬಂದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…