Latest

ಡ್ರೀಮ್ ಡೀಲ್ ಸಂಸ್ಥೆಯ ವಿರುದ್ಧ ಧ್ವನಿ ಎತ್ತಿದ ಇರ್ಫಾನ್‌ಗೆ ಜೀವ ಬೆದರಿಕೆ

ಮುಲ್ಕಿ: ಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆ ಮುನ್ನ ಮಂಝಿಲ್ ನಿವಾಸಿ ಮಹಮ್ಮದ್ ಇರ್ಫಾನ್ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರ ಮುಲ್ಕಿ ಪುನರೂರು ಟೂಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆರಿಸ್ಟ್ ಹೋಮ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಲಿಖಿತ ಹೇಳಿಕೆಯೊಂದಿಗೆ ಈ ಆರೋಪ ಹೊರಿಸಿದರು.

ಮೋಸದ ವಿರುದ್ಧ ಧ್ವನಿ ಎತ್ತಿದರೆ ಬೆದರಿಕೆ

ಇರ್ಫಾನ್ ಹೇಳಿದ ಪ್ರಕಾರ, ಅವರು ಡ್ರೀಮ್ ಡೀಲ್ ಸೀಸನ್-2ರಲ್ಲಿ ಮೂರು ಕಾರ್ಡ್ ಹೊಂದಿದ್ದರು ಮತ್ತು ನೂರಾರು ಜನರನ್ನು ಸದಸ್ಯರನ್ನಾಗಿ ಸೇರಿಸಿದ್ದರು. ಆದರೆ, ಈ ಸಂಸ್ಥೆಯಲ್ಲಿ ಅಕ್ರಮ ನಡೆದು ಜನರಿಗೆ ಅನ್ಯಾಯವಾಗುತ್ತಿದೆ ಎಂಬುದು ಸ್ಪಷ್ಟವಾದಾಗ, ಅವರು ನ್ಯಾಯಕ್ಕಾಗಿ ಧ್ವನಿ ಎತ್ತಿದರು. ಇದರಿಂದ ಅಸಮಾಧಾನಗೊಂಡ ಸಂಸ್ಥೆಯವರೇ ಅವರ ವಿರುದ್ಧ ತೀಕ್ಷ್ಣ ನಡೆ ತೆಗೆದುಕೊಂಡಿದ್ದಾರೆ.

“ನಾನು ಅಕ್ರಮ ವಿರುದ್ಧ ಆವಾಜ್ ಎತ್ತಿದ ಬಳಿಕ, ಡ್ರೀಮ್ ಡೀಲ್ ಕಾರ್ಯಕರ್ತ ಅಶ್ರಫ್ ನನ್ನನ್ನು ಸಂಪರ್ಕಿಸಿ, ಸೂಕ್ತ ನ್ಯಾಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ, ನಂತರ ಗುಲಾಂ ಮುಹಮ್ಮದ್ ಹೆಜಮಾಡಿ ಎಂಬುವವರ ಮೂಲಕ ನನಗೆ ಜೀವ ಬೆದರಿಕೆ ಹಾಕಲಾಯಿತು. ‘ಪಣಂಬೂರು ಎಸಿಪಿ ನನ್ನ ಆತ್ಮೀಯರು. ಅವರ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ನಿನ್ನನ್ನು ಮುಗಿಸಿ ಬಿಡುತ್ತೇನೆ’ ಎಂದು ಗುಲಾಂ ಮುಹಮ್ಮದ್ ಬೆದರಿಸಿದ್ದಾರೆ,” ಎಂದು ಇರ್ಫಾನ್ ಆರೋಪಿಸಿದರು.

ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಈಗಾಗಲೇ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಗುಲಾಂ ಮುಹಮ್ಮದ್‌ಗೆ ಕೊಲೆ ಬೆದರಿಕೆ ಪ್ರಕರಣ

ಇನ್ನು, ಇರ್ಫಾನ್ ವಿರುದ್ಧ ಗುತ್ತಿಗೆ ಸಂಸ್ಥೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಗುಲಾಂ ಮುಹಮ್ಮದ್ ಹೆಜಮಾಡಿ ಅವರು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗುಲಾಂ ಮುಹಮ್ಮದ್ ಅವರ ದೂರಿನ ಪ್ರಕಾರ, ಮುಹಮ್ಮದ್ ಇರ್ಫಾನ್ ಅವರ ಬಗ್ಗೆ ಮಾನಹಾನಿಕರ ಲೇಖನಗಳನ್ನು ಜಾಲತಾಣಗಳಲ್ಲಿ ಹರಡಿದ್ದರೆಂದು ವಿಚಾರಣೆಗೆ ಒಳಪಡಿಸಲಾಯಿತು. ಆದರೆ, ಈ ವಿಚಾರಣೆಯಲ್ಲಿ ಇರ್ಫಾನ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಾತ್ರವಲ್ಲದೆ, ಕೊಲೆ ಬೆದರಿಕೆ ಕೂಡ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಗಳು ಪರಸ್ಪರ ಗಂಭೀರ ಆರೋಪಗಳನ್ನು ಒಳಗೊಂಡಿರುವುದರಿಂದ, ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago