Latest

ಡ್ರೀಮ್ ಡೀಲ್ ಸಂಸ್ಥೆಯ ವಿರುದ್ಧ ಧ್ವನಿ ಎತ್ತಿದ ಇರ್ಫಾನ್‌ಗೆ ಜೀವ ಬೆದರಿಕೆ

ಮುಲ್ಕಿ: ಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆ ಮುನ್ನ ಮಂಝಿಲ್ ನಿವಾಸಿ ಮಹಮ್ಮದ್ ಇರ್ಫಾನ್ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರ ಮುಲ್ಕಿ ಪುನರೂರು ಟೂಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆರಿಸ್ಟ್ ಹೋಮ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಲಿಖಿತ ಹೇಳಿಕೆಯೊಂದಿಗೆ ಈ ಆರೋಪ ಹೊರಿಸಿದರು.

ಮೋಸದ ವಿರುದ್ಧ ಧ್ವನಿ ಎತ್ತಿದರೆ ಬೆದರಿಕೆ

ಇರ್ಫಾನ್ ಹೇಳಿದ ಪ್ರಕಾರ, ಅವರು ಡ್ರೀಮ್ ಡೀಲ್ ಸೀಸನ್-2ರಲ್ಲಿ ಮೂರು ಕಾರ್ಡ್ ಹೊಂದಿದ್ದರು ಮತ್ತು ನೂರಾರು ಜನರನ್ನು ಸದಸ್ಯರನ್ನಾಗಿ ಸೇರಿಸಿದ್ದರು. ಆದರೆ, ಈ ಸಂಸ್ಥೆಯಲ್ಲಿ ಅಕ್ರಮ ನಡೆದು ಜನರಿಗೆ ಅನ್ಯಾಯವಾಗುತ್ತಿದೆ ಎಂಬುದು ಸ್ಪಷ್ಟವಾದಾಗ, ಅವರು ನ್ಯಾಯಕ್ಕಾಗಿ ಧ್ವನಿ ಎತ್ತಿದರು. ಇದರಿಂದ ಅಸಮಾಧಾನಗೊಂಡ ಸಂಸ್ಥೆಯವರೇ ಅವರ ವಿರುದ್ಧ ತೀಕ್ಷ್ಣ ನಡೆ ತೆಗೆದುಕೊಂಡಿದ್ದಾರೆ.

“ನಾನು ಅಕ್ರಮ ವಿರುದ್ಧ ಆವಾಜ್ ಎತ್ತಿದ ಬಳಿಕ, ಡ್ರೀಮ್ ಡೀಲ್ ಕಾರ್ಯಕರ್ತ ಅಶ್ರಫ್ ನನ್ನನ್ನು ಸಂಪರ್ಕಿಸಿ, ಸೂಕ್ತ ನ್ಯಾಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ, ನಂತರ ಗುಲಾಂ ಮುಹಮ್ಮದ್ ಹೆಜಮಾಡಿ ಎಂಬುವವರ ಮೂಲಕ ನನಗೆ ಜೀವ ಬೆದರಿಕೆ ಹಾಕಲಾಯಿತು. ‘ಪಣಂಬೂರು ಎಸಿಪಿ ನನ್ನ ಆತ್ಮೀಯರು. ಅವರ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ನಿನ್ನನ್ನು ಮುಗಿಸಿ ಬಿಡುತ್ತೇನೆ’ ಎಂದು ಗುಲಾಂ ಮುಹಮ್ಮದ್ ಬೆದರಿಸಿದ್ದಾರೆ,” ಎಂದು ಇರ್ಫಾನ್ ಆರೋಪಿಸಿದರು.

ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಈಗಾಗಲೇ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಗುಲಾಂ ಮುಹಮ್ಮದ್‌ಗೆ ಕೊಲೆ ಬೆದರಿಕೆ ಪ್ರಕರಣ

ಇನ್ನು, ಇರ್ಫಾನ್ ವಿರುದ್ಧ ಗುತ್ತಿಗೆ ಸಂಸ್ಥೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಗುಲಾಂ ಮುಹಮ್ಮದ್ ಹೆಜಮಾಡಿ ಅವರು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗುಲಾಂ ಮುಹಮ್ಮದ್ ಅವರ ದೂರಿನ ಪ್ರಕಾರ, ಮುಹಮ್ಮದ್ ಇರ್ಫಾನ್ ಅವರ ಬಗ್ಗೆ ಮಾನಹಾನಿಕರ ಲೇಖನಗಳನ್ನು ಜಾಲತಾಣಗಳಲ್ಲಿ ಹರಡಿದ್ದರೆಂದು ವಿಚಾರಣೆಗೆ ಒಳಪಡಿಸಲಾಯಿತು. ಆದರೆ, ಈ ವಿಚಾರಣೆಯಲ್ಲಿ ಇರ್ಫಾನ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಾತ್ರವಲ್ಲದೆ, ಕೊಲೆ ಬೆದರಿಕೆ ಕೂಡ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಗಳು ಪರಸ್ಪರ ಗಂಭೀರ ಆರೋಪಗಳನ್ನು ಒಳಗೊಂಡಿರುವುದರಿಂದ, ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago