ಮುಲ್ಕಿ: ಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆ ಮುನ್ನ ಮಂಝಿಲ್ ನಿವಾಸಿ ಮಹಮ್ಮದ್ ಇರ್ಫಾನ್ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರ ಮುಲ್ಕಿ ಪುನರೂರು ಟೂಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆರಿಸ್ಟ್ ಹೋಮ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಲಿಖಿತ ಹೇಳಿಕೆಯೊಂದಿಗೆ ಈ ಆರೋಪ ಹೊರಿಸಿದರು.
ಮೋಸದ ವಿರುದ್ಧ ಧ್ವನಿ ಎತ್ತಿದರೆ ಬೆದರಿಕೆ
ಇರ್ಫಾನ್ ಹೇಳಿದ ಪ್ರಕಾರ, ಅವರು ಡ್ರೀಮ್ ಡೀಲ್ ಸೀಸನ್-2ರಲ್ಲಿ ಮೂರು ಕಾರ್ಡ್ ಹೊಂದಿದ್ದರು ಮತ್ತು ನೂರಾರು ಜನರನ್ನು ಸದಸ್ಯರನ್ನಾಗಿ ಸೇರಿಸಿದ್ದರು. ಆದರೆ, ಈ ಸಂಸ್ಥೆಯಲ್ಲಿ ಅಕ್ರಮ ನಡೆದು ಜನರಿಗೆ ಅನ್ಯಾಯವಾಗುತ್ತಿದೆ ಎಂಬುದು ಸ್ಪಷ್ಟವಾದಾಗ, ಅವರು ನ್ಯಾಯಕ್ಕಾಗಿ ಧ್ವನಿ ಎತ್ತಿದರು. ಇದರಿಂದ ಅಸಮಾಧಾನಗೊಂಡ ಸಂಸ್ಥೆಯವರೇ ಅವರ ವಿರುದ್ಧ ತೀಕ್ಷ್ಣ ನಡೆ ತೆಗೆದುಕೊಂಡಿದ್ದಾರೆ.
“ನಾನು ಅಕ್ರಮ ವಿರುದ್ಧ ಆವಾಜ್ ಎತ್ತಿದ ಬಳಿಕ, ಡ್ರೀಮ್ ಡೀಲ್ ಕಾರ್ಯಕರ್ತ ಅಶ್ರಫ್ ನನ್ನನ್ನು ಸಂಪರ್ಕಿಸಿ, ಸೂಕ್ತ ನ್ಯಾಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ, ನಂತರ ಗುಲಾಂ ಮುಹಮ್ಮದ್ ಹೆಜಮಾಡಿ ಎಂಬುವವರ ಮೂಲಕ ನನಗೆ ಜೀವ ಬೆದರಿಕೆ ಹಾಕಲಾಯಿತು. ‘ಪಣಂಬೂರು ಎಸಿಪಿ ನನ್ನ ಆತ್ಮೀಯರು. ಅವರ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ನಿನ್ನನ್ನು ಮುಗಿಸಿ ಬಿಡುತ್ತೇನೆ’ ಎಂದು ಗುಲಾಂ ಮುಹಮ್ಮದ್ ಬೆದರಿಸಿದ್ದಾರೆ,” ಎಂದು ಇರ್ಫಾನ್ ಆರೋಪಿಸಿದರು.
ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಈಗಾಗಲೇ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಗುಲಾಂ ಮುಹಮ್ಮದ್ಗೆ ಕೊಲೆ ಬೆದರಿಕೆ ಪ್ರಕರಣ
ಇನ್ನು, ಇರ್ಫಾನ್ ವಿರುದ್ಧ ಗುತ್ತಿಗೆ ಸಂಸ್ಥೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಗುಲಾಂ ಮುಹಮ್ಮದ್ ಹೆಜಮಾಡಿ ಅವರು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಗುಲಾಂ ಮುಹಮ್ಮದ್ ಅವರ ದೂರಿನ ಪ್ರಕಾರ, ಮುಹಮ್ಮದ್ ಇರ್ಫಾನ್ ಅವರ ಬಗ್ಗೆ ಮಾನಹಾನಿಕರ ಲೇಖನಗಳನ್ನು ಜಾಲತಾಣಗಳಲ್ಲಿ ಹರಡಿದ್ದರೆಂದು ವಿಚಾರಣೆಗೆ ಒಳಪಡಿಸಲಾಯಿತು. ಆದರೆ, ಈ ವಿಚಾರಣೆಯಲ್ಲಿ ಇರ್ಫಾನ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಾತ್ರವಲ್ಲದೆ, ಕೊಲೆ ಬೆದರಿಕೆ ಕೂಡ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣಗಳು ಪರಸ್ಪರ ಗಂಭೀರ ಆರೋಪಗಳನ್ನು ಒಳಗೊಂಡಿರುವುದರಿಂದ, ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…