ಮುಲ್ಕಿ: ಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆ ಮುನ್ನ ಮಂಝಿಲ್ ನಿವಾಸಿ ಮಹಮ್ಮದ್ ಇರ್ಫಾನ್ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರ ಮುಲ್ಕಿ ಪುನರೂರು ಟೂಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆರಿಸ್ಟ್ ಹೋಮ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಲಿಖಿತ ಹೇಳಿಕೆಯೊಂದಿಗೆ ಈ ಆರೋಪ ಹೊರಿಸಿದರು.
ಮೋಸದ ವಿರುದ್ಧ ಧ್ವನಿ ಎತ್ತಿದರೆ ಬೆದರಿಕೆ
ಇರ್ಫಾನ್ ಹೇಳಿದ ಪ್ರಕಾರ, ಅವರು ಡ್ರೀಮ್ ಡೀಲ್ ಸೀಸನ್-2ರಲ್ಲಿ ಮೂರು ಕಾರ್ಡ್ ಹೊಂದಿದ್ದರು ಮತ್ತು ನೂರಾರು ಜನರನ್ನು ಸದಸ್ಯರನ್ನಾಗಿ ಸೇರಿಸಿದ್ದರು. ಆದರೆ, ಈ ಸಂಸ್ಥೆಯಲ್ಲಿ ಅಕ್ರಮ ನಡೆದು ಜನರಿಗೆ ಅನ್ಯಾಯವಾಗುತ್ತಿದೆ ಎಂಬುದು ಸ್ಪಷ್ಟವಾದಾಗ, ಅವರು ನ್ಯಾಯಕ್ಕಾಗಿ ಧ್ವನಿ ಎತ್ತಿದರು. ಇದರಿಂದ ಅಸಮಾಧಾನಗೊಂಡ ಸಂಸ್ಥೆಯವರೇ ಅವರ ವಿರುದ್ಧ ತೀಕ್ಷ್ಣ ನಡೆ ತೆಗೆದುಕೊಂಡಿದ್ದಾರೆ.
“ನಾನು ಅಕ್ರಮ ವಿರುದ್ಧ ಆವಾಜ್ ಎತ್ತಿದ ಬಳಿಕ, ಡ್ರೀಮ್ ಡೀಲ್ ಕಾರ್ಯಕರ್ತ ಅಶ್ರಫ್ ನನ್ನನ್ನು ಸಂಪರ್ಕಿಸಿ, ಸೂಕ್ತ ನ್ಯಾಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ, ನಂತರ ಗುಲಾಂ ಮುಹಮ್ಮದ್ ಹೆಜಮಾಡಿ ಎಂಬುವವರ ಮೂಲಕ ನನಗೆ ಜೀವ ಬೆದರಿಕೆ ಹಾಕಲಾಯಿತು. ‘ಪಣಂಬೂರು ಎಸಿಪಿ ನನ್ನ ಆತ್ಮೀಯರು. ಅವರ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ನಿನ್ನನ್ನು ಮುಗಿಸಿ ಬಿಡುತ್ತೇನೆ’ ಎಂದು ಗುಲಾಂ ಮುಹಮ್ಮದ್ ಬೆದರಿಸಿದ್ದಾರೆ,” ಎಂದು ಇರ್ಫಾನ್ ಆರೋಪಿಸಿದರು.
ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಈಗಾಗಲೇ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಗುಲಾಂ ಮುಹಮ್ಮದ್ಗೆ ಕೊಲೆ ಬೆದರಿಕೆ ಪ್ರಕರಣ
ಇನ್ನು, ಇರ್ಫಾನ್ ವಿರುದ್ಧ ಗುತ್ತಿಗೆ ಸಂಸ್ಥೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಗುಲಾಂ ಮುಹಮ್ಮದ್ ಹೆಜಮಾಡಿ ಅವರು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಗುಲಾಂ ಮುಹಮ್ಮದ್ ಅವರ ದೂರಿನ ಪ್ರಕಾರ, ಮುಹಮ್ಮದ್ ಇರ್ಫಾನ್ ಅವರ ಬಗ್ಗೆ ಮಾನಹಾನಿಕರ ಲೇಖನಗಳನ್ನು ಜಾಲತಾಣಗಳಲ್ಲಿ ಹರಡಿದ್ದರೆಂದು ವಿಚಾರಣೆಗೆ ಒಳಪಡಿಸಲಾಯಿತು. ಆದರೆ, ಈ ವಿಚಾರಣೆಯಲ್ಲಿ ಇರ್ಫಾನ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಾತ್ರವಲ್ಲದೆ, ಕೊಲೆ ಬೆದರಿಕೆ ಕೂಡ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣಗಳು ಪರಸ್ಪರ ಗಂಭೀರ ಆರೋಪಗಳನ್ನು ಒಳಗೊಂಡಿರುವುದರಿಂದ, ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…