Latest

ಮಹಿಳೆಯರಲ್ಲಿ ಕಬ್ಬಿಣಾಂಶ, ಪ್ರೋಟಿನ್ ಹಾಗೂ ವಿಟಮಿನ್ ಡಿ ಕೊರತೆ:-ವೈದ್ಯೆ ಡಾ|| ಜ್ಯೋತಿ ಲಕ್ಷ್ಮೀ ಪಾಟೀಲ್

ಆಲಮಟ್ಟಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ, ಮಗು ಹುಟ್ಟಿದಾಗ ಅದರ ಆರೈಕೆಯಿಂದಲೇ ಮಗುವಿನ ಮುಂದಿನ ಆರೋಗ್ಯಕರ ಭವಿಷ್ಯ ನಿರ್ಮಾಣವಾಗುತ್ತದೆ, ಹೀಗಾಗಿ ಮಗುವಿಗೆ ತಾಯಿ ಹಾಲು ಕುಡಿಸುವುದು ಅತಿ ಅಗತ್ಯ ಎಂದು ಶಿವಮೊಗ್ಗದ ವೈದ್ಯೆ ಡಾ ಜ್ಯೋತಿಲಕ್ಷ್ಮಿ ಪಾಟೀಲ ಹೇಳಿದರು.

ಆಲಮಟ್ಟಿಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕೆಬಿಜೆಎನ್ ಎಲ್ ಸಹಯೋಗದಲ್ಲಿ ಶುಕ್ರವಾರ 21/03/2025 ಜರುಗಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹುಟ್ಟಿದ ಮಗುವಿನ ಆರೈಕೆ ಅತ್ಯಗತ್ಯ. ಕುಟುಂಬದ ಆರೋಗ್ಯ ರಕ್ಷಣೆಗೆ ಆರೋಗ್ಯಕರ ಆಹಾರ ಸೇವಿಸುವುದು ಅಗತ್ಯ, ಅದಕ್ಕಾಗಿ ನೈಸರ್ಗಿಕ ಆಹಾರ,  ಸಿರಿಧಾನ್ಯಗಳ ಬಳಕೆ, ಹಣ್ಣುಗಳಿಗೆ ಹೆಚ್ಚು ಒತ್ತು ನೀಡಿದರೆ ಇಡೀ ಕುಟುಂಬದ ಆರೋಗ್ಯವೂ ಸುಧಾರಣೆಯಾಗುತ್ತದೆ ಎಂದರು. ಅದಕ್ಕಾಗಿ ನೈಸರ್ಗಿಕ ವಸ್ತುಗಳ ಬಳಕೆ ಮಾಡುವ ಹಾಗೂ ನಾನಾ ಅಡುಗೆ ತಿಂಡಿಗಳನ್ನು ಪ್ರಸ್ತಾಪಿಸಿದ್ದು, ಮಹಿಳೆಯರು ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ ಎಂದರು. ಮಹಿಳೆಯರಲ್ಲಿ ಕಬ್ಬಿಣಾಂಶ,  ಪ್ರೊಟಿನ್ ಹಾಗೂ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಾಣುತ್ತಿದೆ, ಇದರಿಂದ ಮೂಳೆ ಸವೆತ ರೋಗ, ರಕ್ತಹೀನತೆ ಕಾಯಿಲೆ ಹೆಚ್ಚುತ್ತಿದೆ ಎಂದರು.  ಮಹಿಳೆಯರ ಆರೋಗ್ಯದ ವಿಚಾರ ಹಾಗೂ ದಿನಚರಿಗೆ ಸಂಬಂಧಪಟ್ಟಂತೆ ಹಲವು ಸಲಹೆಗಳನ್ನು ಸಹ ಕಾರ್ಯಕ್ರಮದಲ್ಲಿ ಹೇಳಿರುತ್ತಾರೆ.

ಮುಖ್ಯ ಎಂಜಿನಿಯ‌ರ್ ಡಿ.ಬಸವರಾಜ ಕಾರ್ಯಕ್ರಮ ಉದ್ಘಾಟಿಸಿದರೇ,  ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ದಳವಾಯಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸಹನಾ ಬಸವರಾಜ, ಸುವರ್ಣಾ ಹಿರೇಗೌಡರ, ಪುಷ್ಪಾ ರಾಠೋಡ, ಉಷಾ ಗುಂಡ, ಮಹೇಶ್ವರಿ ಪಾಟೀಲ, ಡಾ.ರಾಜೇಶ್ವರಿ ಹದ್ದಿ, ಕೋಮಲ ನಾಯಕ್, ವಿಜಯಲಕ್ಷ್ಮಿ ರೆಡ್ಡಿ, ಬಸವರಾಜ ಬನ್ನೂರ, ವೈ. ಎಂ.ಪಾತ್ರೋಟ, ಶ್ರೀರಕ್ಷಾ, ಮಹಾಂತೇಶ ಒಡೆಯರ ಮತ್ತೀತರರು ಭಾಗಿಯಾಗಿದ್ದರು. ವರದಿ: ಸಂಗಪ್ಪ ಚಲವಾದಿ

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

5 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

5 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

6 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago