Latest

ರಸ್ತೆ ಸರಿಪಡಿಸಲು ಕ್ರಮ ಕೈಗೊಳ್ಳದ ಬೇಜವಬ್ದಾರಿ ಅಧಿಕಾರಿಗಳು

ಹಗರಿಗಜಾಪುರದಿಂದ ಕೊಟ್ಟೂರು ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಇದನ್ನು ಸರಿಪಡಿಸಬೇಕಾದ ಸಂಬಂಧ ಪಟ್ಟ ಅಧಿಕಾರಿಗಳು ನಮಗೆ ಏನು ಗೊತ್ತೇ ಇಲ್ಲ ಅನ್ನುವ ತರ ಇದ್ದಾರೆ.
ಕೊಟ್ಟುರಿನಿಂದ ಕೇವಲ ನಾಲ್ಕು ಕಿಲೋಮೀಟರ್ ಅಂತರವಿರುವ ಹಗರಿಗಜಾಪುರ ತಲುಪಲು ಅರ್ಧ ಘಂಟೆ ಸಮಯ ತೆಗೆದುಕೊಳ್ಳುತ್ತಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಎಷ್ಟೋ ಜನರು ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಇದಾವೆ. ರಸ್ತೆ ಎಲ್ಲಾ ತಿಪ್ಪೆಗುಂಡಿಗಳಾಗಿ ಮಾರ್ಪಟ್ಟಿದೆ. ರಸ್ತೆಯ ಅಕ್ಕ ಪಕ್ಕ ಎಲ್ಲಿ ನೋಡಿದರೂ ಕಸದ ರಾಶಿಯೇ ಕಾಣಿಸುತ್ತದೆ. ಕಸದಿಂದಲೆ ಅರ್ಧ ರಸ್ತೆಯು ಮುಚ್ಚಿಕೊಂಡು ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲ ಕಣ್ಣಿಗೆ ಕಾಣುತ್ತಿದ್ದರು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನವನ್ನು ತೋರುತ್ತಿದ್ದಾರೆ.
ಈ ರಸ್ತೆಯು ಪ್ರಮುಖವಾಗಿ ಪಟ್ಟಣದಿಂದ ರೈಲ್ವೇ ಸ್ಟೇಷನನ್ನು ಸಂಪರ್ಕಿಸುತ್ತದೆ. ಈ ರಸ್ತೆಯಲ್ಲಿ ದಿನಾಲೂ ನೂರಾರು ಜನರು ಸಂಚರಿಸುತ್ತಾರೆ, ರಸ್ತೆ ಸರಿಯಿಲ್ಲದ ಕಾರಣ ಪ್ರಯಾಣದ ಸಮಯ ಹೆಚ್ಚುವುದು ಮಾತ್ರವಲ್ಲದೆ ರಸ್ತೆಯಲ್ಲಿ ಸಂಚರಿಸುವವರು ಸಂಚರಿಸಲು ಅರಸಹಸ ಪಡುವಂಥಾಗಿದೆ.
ಸಾಕಷ್ಟು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದೆ ಎಂಬುದನ್ನು ರಸ್ತೆ ನೋಡಿದರೆ ತಿಳಿಯಬಹುದು.
ಸ್ಥಳೀಯ ಜನಪ್ರತಿನಿಧಿಗಳು ಸಹ ಈ ವಿಚಾರದ ಬಗ್ಗೆ ಗಮನ ಹರಿಸದಿರುವುದು ಬೇಸರದ ಸಂಗತಿ. ಜನರಿಗೆ ಸಂಚರಿಸಲು ಸರಿಯಾದ ರೀತಿಯ ರಸ್ತೆಯನ್ನೇ ಮಾಡಿಕೊಡದ ಜನಪ್ರತಿನಿಧಿಗಳು ಇನ್ಯಾವ ರೀತಿ ತಾಲೂಕನ್ನು ಅಭಿವೃದ್ಧಿಪಡಿಸುತ್ತಾರೋ?
ನೂರಾರು ಜನರು ಸಂಚರಿಸುವ ಪ್ರಮುಖ ರಸ್ತೆ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒತ್ತು ಕೊಡದೆ ಇರುವುದು ಸ್ಥಳೀಯ ಜನರ ಆಕಾಶಕ್ಕೆ ಕಾರಣವಾಗಿದೆ.
ಪ್ರಮುಖ ರಸ್ತೆಯಾಗಿರುವುದರಿಂದ ಸಾರ್ವಜನಿಕರು ಓಡಾಡಲು ಹೆಚ್ಚಾಗಿ ರಸ್ತೆಯನ್ನು ಬಳಸುತ್ತಿದ್ದು ಶೀಘ್ರದಲ್ಲೇ ರಸ್ತೆಯನ್ನು ಸರಿಪಡಿಸಬೇಕಿದೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago