Latest

ರಸ್ತೆ ಸರಿಪಡಿಸಲು ಕ್ರಮ ಕೈಗೊಳ್ಳದ ಬೇಜವಬ್ದಾರಿ ಅಧಿಕಾರಿಗಳು

ಹಗರಿಗಜಾಪುರದಿಂದ ಕೊಟ್ಟೂರು ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಇದನ್ನು ಸರಿಪಡಿಸಬೇಕಾದ ಸಂಬಂಧ ಪಟ್ಟ ಅಧಿಕಾರಿಗಳು ನಮಗೆ ಏನು ಗೊತ್ತೇ ಇಲ್ಲ ಅನ್ನುವ ತರ ಇದ್ದಾರೆ.
ಕೊಟ್ಟುರಿನಿಂದ ಕೇವಲ ನಾಲ್ಕು ಕಿಲೋಮೀಟರ್ ಅಂತರವಿರುವ ಹಗರಿಗಜಾಪುರ ತಲುಪಲು ಅರ್ಧ ಘಂಟೆ ಸಮಯ ತೆಗೆದುಕೊಳ್ಳುತ್ತಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಎಷ್ಟೋ ಜನರು ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಇದಾವೆ. ರಸ್ತೆ ಎಲ್ಲಾ ತಿಪ್ಪೆಗುಂಡಿಗಳಾಗಿ ಮಾರ್ಪಟ್ಟಿದೆ. ರಸ್ತೆಯ ಅಕ್ಕ ಪಕ್ಕ ಎಲ್ಲಿ ನೋಡಿದರೂ ಕಸದ ರಾಶಿಯೇ ಕಾಣಿಸುತ್ತದೆ. ಕಸದಿಂದಲೆ ಅರ್ಧ ರಸ್ತೆಯು ಮುಚ್ಚಿಕೊಂಡು ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲ ಕಣ್ಣಿಗೆ ಕಾಣುತ್ತಿದ್ದರು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನವನ್ನು ತೋರುತ್ತಿದ್ದಾರೆ.
ಈ ರಸ್ತೆಯು ಪ್ರಮುಖವಾಗಿ ಪಟ್ಟಣದಿಂದ ರೈಲ್ವೇ ಸ್ಟೇಷನನ್ನು ಸಂಪರ್ಕಿಸುತ್ತದೆ. ಈ ರಸ್ತೆಯಲ್ಲಿ ದಿನಾಲೂ ನೂರಾರು ಜನರು ಸಂಚರಿಸುತ್ತಾರೆ, ರಸ್ತೆ ಸರಿಯಿಲ್ಲದ ಕಾರಣ ಪ್ರಯಾಣದ ಸಮಯ ಹೆಚ್ಚುವುದು ಮಾತ್ರವಲ್ಲದೆ ರಸ್ತೆಯಲ್ಲಿ ಸಂಚರಿಸುವವರು ಸಂಚರಿಸಲು ಅರಸಹಸ ಪಡುವಂಥಾಗಿದೆ.
ಸಾಕಷ್ಟು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದೆ ಎಂಬುದನ್ನು ರಸ್ತೆ ನೋಡಿದರೆ ತಿಳಿಯಬಹುದು.
ಸ್ಥಳೀಯ ಜನಪ್ರತಿನಿಧಿಗಳು ಸಹ ಈ ವಿಚಾರದ ಬಗ್ಗೆ ಗಮನ ಹರಿಸದಿರುವುದು ಬೇಸರದ ಸಂಗತಿ. ಜನರಿಗೆ ಸಂಚರಿಸಲು ಸರಿಯಾದ ರೀತಿಯ ರಸ್ತೆಯನ್ನೇ ಮಾಡಿಕೊಡದ ಜನಪ್ರತಿನಿಧಿಗಳು ಇನ್ಯಾವ ರೀತಿ ತಾಲೂಕನ್ನು ಅಭಿವೃದ್ಧಿಪಡಿಸುತ್ತಾರೋ?
ನೂರಾರು ಜನರು ಸಂಚರಿಸುವ ಪ್ರಮುಖ ರಸ್ತೆ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒತ್ತು ಕೊಡದೆ ಇರುವುದು ಸ್ಥಳೀಯ ಜನರ ಆಕಾಶಕ್ಕೆ ಕಾರಣವಾಗಿದೆ.
ಪ್ರಮುಖ ರಸ್ತೆಯಾಗಿರುವುದರಿಂದ ಸಾರ್ವಜನಿಕರು ಓಡಾಡಲು ಹೆಚ್ಚಾಗಿ ರಸ್ತೆಯನ್ನು ಬಳಸುತ್ತಿದ್ದು ಶೀಘ್ರದಲ್ಲೇ ರಸ್ತೆಯನ್ನು ಸರಿಪಡಿಸಬೇಕಿದೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

2 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

2 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

17 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

17 hours ago