Latest

ರಸ್ತೆ ಸರಿಪಡಿಸಲು ಕ್ರಮ ಕೈಗೊಳ್ಳದ ಬೇಜವಬ್ದಾರಿ ಅಧಿಕಾರಿಗಳು

ಹಗರಿಗಜಾಪುರದಿಂದ ಕೊಟ್ಟೂರು ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಇದನ್ನು ಸರಿಪಡಿಸಬೇಕಾದ ಸಂಬಂಧ ಪಟ್ಟ ಅಧಿಕಾರಿಗಳು ನಮಗೆ ಏನು ಗೊತ್ತೇ ಇಲ್ಲ ಅನ್ನುವ ತರ ಇದ್ದಾರೆ.
ಕೊಟ್ಟುರಿನಿಂದ ಕೇವಲ ನಾಲ್ಕು ಕಿಲೋಮೀಟರ್ ಅಂತರವಿರುವ ಹಗರಿಗಜಾಪುರ ತಲುಪಲು ಅರ್ಧ ಘಂಟೆ ಸಮಯ ತೆಗೆದುಕೊಳ್ಳುತ್ತಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಎಷ್ಟೋ ಜನರು ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಇದಾವೆ. ರಸ್ತೆ ಎಲ್ಲಾ ತಿಪ್ಪೆಗುಂಡಿಗಳಾಗಿ ಮಾರ್ಪಟ್ಟಿದೆ. ರಸ್ತೆಯ ಅಕ್ಕ ಪಕ್ಕ ಎಲ್ಲಿ ನೋಡಿದರೂ ಕಸದ ರಾಶಿಯೇ ಕಾಣಿಸುತ್ತದೆ. ಕಸದಿಂದಲೆ ಅರ್ಧ ರಸ್ತೆಯು ಮುಚ್ಚಿಕೊಂಡು ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲ ಕಣ್ಣಿಗೆ ಕಾಣುತ್ತಿದ್ದರು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನವನ್ನು ತೋರುತ್ತಿದ್ದಾರೆ.
ಈ ರಸ್ತೆಯು ಪ್ರಮುಖವಾಗಿ ಪಟ್ಟಣದಿಂದ ರೈಲ್ವೇ ಸ್ಟೇಷನನ್ನು ಸಂಪರ್ಕಿಸುತ್ತದೆ. ಈ ರಸ್ತೆಯಲ್ಲಿ ದಿನಾಲೂ ನೂರಾರು ಜನರು ಸಂಚರಿಸುತ್ತಾರೆ, ರಸ್ತೆ ಸರಿಯಿಲ್ಲದ ಕಾರಣ ಪ್ರಯಾಣದ ಸಮಯ ಹೆಚ್ಚುವುದು ಮಾತ್ರವಲ್ಲದೆ ರಸ್ತೆಯಲ್ಲಿ ಸಂಚರಿಸುವವರು ಸಂಚರಿಸಲು ಅರಸಹಸ ಪಡುವಂಥಾಗಿದೆ.
ಸಾಕಷ್ಟು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದೆ ಎಂಬುದನ್ನು ರಸ್ತೆ ನೋಡಿದರೆ ತಿಳಿಯಬಹುದು.
ಸ್ಥಳೀಯ ಜನಪ್ರತಿನಿಧಿಗಳು ಸಹ ಈ ವಿಚಾರದ ಬಗ್ಗೆ ಗಮನ ಹರಿಸದಿರುವುದು ಬೇಸರದ ಸಂಗತಿ. ಜನರಿಗೆ ಸಂಚರಿಸಲು ಸರಿಯಾದ ರೀತಿಯ ರಸ್ತೆಯನ್ನೇ ಮಾಡಿಕೊಡದ ಜನಪ್ರತಿನಿಧಿಗಳು ಇನ್ಯಾವ ರೀತಿ ತಾಲೂಕನ್ನು ಅಭಿವೃದ್ಧಿಪಡಿಸುತ್ತಾರೋ?
ನೂರಾರು ಜನರು ಸಂಚರಿಸುವ ಪ್ರಮುಖ ರಸ್ತೆ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒತ್ತು ಕೊಡದೆ ಇರುವುದು ಸ್ಥಳೀಯ ಜನರ ಆಕಾಶಕ್ಕೆ ಕಾರಣವಾಗಿದೆ.
ಪ್ರಮುಖ ರಸ್ತೆಯಾಗಿರುವುದರಿಂದ ಸಾರ್ವಜನಿಕರು ಓಡಾಡಲು ಹೆಚ್ಚಾಗಿ ರಸ್ತೆಯನ್ನು ಬಳಸುತ್ತಿದ್ದು ಶೀಘ್ರದಲ್ಲೇ ರಸ್ತೆಯನ್ನು ಸರಿಪಡಿಸಬೇಕಿದೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಲಿಂಗಸಗೂರು ತಾಲೂಕಿನಲ್ಲಿ ಕಳ್ಳಭಟ್ಟಿ ದಂಧೆ ವಿರುದ್ಧ ಅಬಕಾರಿ ದಾಳಿ: 4 ಲೀಟರ್ ಸರಾಯಿ ವಶ, ಮೂವರು ಬಂಧನ

ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…

1 hour ago

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

1 day ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

1 day ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

1 day ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

1 day ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

1 day ago