Latest

ರಸ್ತೆ ಸರಿಪಡಿಸಲು ಕ್ರಮ ಕೈಗೊಳ್ಳದ ಬೇಜವಬ್ದಾರಿ ಅಧಿಕಾರಿಗಳು

ಹಗರಿಗಜಾಪುರದಿಂದ ಕೊಟ್ಟೂರು ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಇದನ್ನು ಸರಿಪಡಿಸಬೇಕಾದ ಸಂಬಂಧ ಪಟ್ಟ ಅಧಿಕಾರಿಗಳು ನಮಗೆ ಏನು ಗೊತ್ತೇ ಇಲ್ಲ ಅನ್ನುವ ತರ ಇದ್ದಾರೆ.
ಕೊಟ್ಟುರಿನಿಂದ ಕೇವಲ ನಾಲ್ಕು ಕಿಲೋಮೀಟರ್ ಅಂತರವಿರುವ ಹಗರಿಗಜಾಪುರ ತಲುಪಲು ಅರ್ಧ ಘಂಟೆ ಸಮಯ ತೆಗೆದುಕೊಳ್ಳುತ್ತಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಎಷ್ಟೋ ಜನರು ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಇದಾವೆ. ರಸ್ತೆ ಎಲ್ಲಾ ತಿಪ್ಪೆಗುಂಡಿಗಳಾಗಿ ಮಾರ್ಪಟ್ಟಿದೆ. ರಸ್ತೆಯ ಅಕ್ಕ ಪಕ್ಕ ಎಲ್ಲಿ ನೋಡಿದರೂ ಕಸದ ರಾಶಿಯೇ ಕಾಣಿಸುತ್ತದೆ. ಕಸದಿಂದಲೆ ಅರ್ಧ ರಸ್ತೆಯು ಮುಚ್ಚಿಕೊಂಡು ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲ ಕಣ್ಣಿಗೆ ಕಾಣುತ್ತಿದ್ದರು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನವನ್ನು ತೋರುತ್ತಿದ್ದಾರೆ.
ಈ ರಸ್ತೆಯು ಪ್ರಮುಖವಾಗಿ ಪಟ್ಟಣದಿಂದ ರೈಲ್ವೇ ಸ್ಟೇಷನನ್ನು ಸಂಪರ್ಕಿಸುತ್ತದೆ. ಈ ರಸ್ತೆಯಲ್ಲಿ ದಿನಾಲೂ ನೂರಾರು ಜನರು ಸಂಚರಿಸುತ್ತಾರೆ, ರಸ್ತೆ ಸರಿಯಿಲ್ಲದ ಕಾರಣ ಪ್ರಯಾಣದ ಸಮಯ ಹೆಚ್ಚುವುದು ಮಾತ್ರವಲ್ಲದೆ ರಸ್ತೆಯಲ್ಲಿ ಸಂಚರಿಸುವವರು ಸಂಚರಿಸಲು ಅರಸಹಸ ಪಡುವಂಥಾಗಿದೆ.
ಸಾಕಷ್ಟು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದೆ ಎಂಬುದನ್ನು ರಸ್ತೆ ನೋಡಿದರೆ ತಿಳಿಯಬಹುದು.
ಸ್ಥಳೀಯ ಜನಪ್ರತಿನಿಧಿಗಳು ಸಹ ಈ ವಿಚಾರದ ಬಗ್ಗೆ ಗಮನ ಹರಿಸದಿರುವುದು ಬೇಸರದ ಸಂಗತಿ. ಜನರಿಗೆ ಸಂಚರಿಸಲು ಸರಿಯಾದ ರೀತಿಯ ರಸ್ತೆಯನ್ನೇ ಮಾಡಿಕೊಡದ ಜನಪ್ರತಿನಿಧಿಗಳು ಇನ್ಯಾವ ರೀತಿ ತಾಲೂಕನ್ನು ಅಭಿವೃದ್ಧಿಪಡಿಸುತ್ತಾರೋ?
ನೂರಾರು ಜನರು ಸಂಚರಿಸುವ ಪ್ರಮುಖ ರಸ್ತೆ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒತ್ತು ಕೊಡದೆ ಇರುವುದು ಸ್ಥಳೀಯ ಜನರ ಆಕಾಶಕ್ಕೆ ಕಾರಣವಾಗಿದೆ.
ಪ್ರಮುಖ ರಸ್ತೆಯಾಗಿರುವುದರಿಂದ ಸಾರ್ವಜನಿಕರು ಓಡಾಡಲು ಹೆಚ್ಚಾಗಿ ರಸ್ತೆಯನ್ನು ಬಳಸುತ್ತಿದ್ದು ಶೀಘ್ರದಲ್ಲೇ ರಸ್ತೆಯನ್ನು ಸರಿಪಡಿಸಬೇಕಿದೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

3 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

22 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago